Home News Crime: ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆ ಯತ್ನ: ತಾಯಿ, ಮಗ ಅರೆಸ್ಟ್!

Crime: ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆ ಯತ್ನ: ತಾಯಿ, ಮಗ ಅರೆಸ್ಟ್!

Hindu neighbor gifts plot of land

Hindu neighbour gifts land to Muslim journalist

Crime: ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಇಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ (Crime) ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ 13-05-2025 ರಂದು ಮಧ್ಯಾಹ್ನ 4.30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸನ್ ಜಗಳ ನಿರತನಾಗಿದ್ದಾನೆ. ಜೋರಾದ ಬೊಬ್ಬೆ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಅವರಿಗೆ ಟಿಮ್ಸನ್ ನಿಂದಿಸಿ ತಲೆಗೆ ಹೊಡೆದಿದ್ದು, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸನ್ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಳಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಇವರಿಬ್ಬರ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಪ್ರಕರಣ ಬಗ್ಗೆ ತನಿಖೆ ಕೈಗೊಳ್ಳಲಾಗಿ ದಿನಾಂಕ 14-05-2025ರಂದು ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳಾದ ಟಿಮ್ಸನ್ ಮತ್ತು ಜ್ಯೋತಿ ಆಸ್ತಿ ವಿಚಾರವಾಗಿ ಜಗಳವಾಡಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.