Home News Beluru: ಬೇಲೂರು: ಆನೆ ತುಳಿತಕ್ಕೆ ಮಹಿಳೆ ಸಾವು, ಕಳೆದ 3 ತಿಂಗಳಲ್ಲಿ 5 ಸಾವು

Beluru: ಬೇಲೂರು: ಆನೆ ತುಳಿತಕ್ಕೆ ಮಹಿಳೆ ಸಾವು, ಕಳೆದ 3 ತಿಂಗಳಲ್ಲಿ 5 ಸಾವು

Hassan Elephant Attack

Hindu neighbor gifts plot of land

Hindu neighbour gifts land to Muslim journalist

Hassana: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದ್ದು, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದ್ದು, ಹತ್ತಿರದ ಕಾಫಿ ತೋಟಕ್ಕೆ ಹೋಗುತ್ತಿದ್ದಾಗ ಆನೆಯ ದಾಳಿಗೆ ಒಳಗಾಗಿದ್ದಾರೆ. ಘಟನೆಯ ನಂತರ, ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮೃತರ ಶವವನ್ನು ಸ್ಥಳಾಂತರಿಸಲು ನಿರಾಕರಿಸಿದದ್ದು, ಜಿಲ್ಲಾ ಸಚಿವ ಕೆ ಎನ್ ರಾಜಣ್ಣ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪರಿಹಾರವನ್ನು ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲ್ಲೂಕುಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಐದು ಜನರು ಆನೆಗೆ ಬಲಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಜನರು ಕೃಷಿ ಕೆಲಸಗಳಿಗೆ ತೆರಳಲು ಭಯ ಪಡುತ್ತಿದ್ದಾರೆ. ಸಕಲೇಶಪುರ ತಾಲ್ಲೂಕಿನ ಕೆರೋಡಿ ಗ್ರಾಮಸ್ಥರು ಇತ್ತೀಚೆಗೆ ಹಾಡಹಗಲೇ ಗ್ರಾಮಕ್ಕೆ ಆನೆಯೊಂದು ಪ್ರವೇಶಿಸಿದ ನಂತರ ಬಹಳ ಭಯಭೀತರಾಗಿದ್ದು, ಆನೆಗಳ ಹಾವಳಿ ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.