Karkala: ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಜಾಮೀನು

Karkala: ಅ.20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನವಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇನ್ನೋರ್ವ ಆರೋಪಿ ಪ್ರಿಯಕರ ದಿಲೀಪ್ ಹೆಗ್ಡೆ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ತನ್ನ ಪತಿ ದಿಲೀಪ್ನನ್ನು ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಸೇರಿ ಕೊಲೆ ಮಾಡಿರುವ ಆರೋಪದಲ್ಲಿ ಅ.25 ರಂದು ಅಜೆಕಾರು ಠಾಣೆ ಪೊಲೀಸರು ಇಬ್ಬರನ್ನೂ ಬಂಧನ ಮಾಡಿದ್ದರು.
Comments are closed.