Mangalore: ಮಂಗಳೂರು – ಅಯೋಧ್ಯೆ ಮಧ್ಯೆ ನೇರ ರೈಲು ವ್ಯವಸ್ಥೆ ಕಲ್ಪಿಸುವಂತೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ!

Mangalore: ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ ಜನತೆ ಅಯೋಧ್ಯೆ ಕ್ಷೇತ್ರದ ಬಗ್ಗೆ ಪ್ರಾಚೀನ ಕಾಲದಿಂದಲೂ ಅಪಾರ ಶ್ರದ್ದೆ ಹೊಂದಿದ್ದು ಪ್ರಸ್ತುತ ಈ ಭಕ್ತರು ಬೆಂಗಳೂರು ಅಥವಾ ಇತರ ಮಾರ್ಗಗಳ ಮೂಲಕ ಅಯೋಧ್ಯೆಗೆ ತೆರಳಲು 40 ಗಂಟೆಗಳಿಗೂ ಅಧಿಕ ಸಮಯ ಬೇಕಾಗುತ್ತದೆ.

ಹೀಗಾಗಿ ಮಂಗಳೂರು (Mangalore) -ಅಯೋಧ್ಯೆ ಮಧ್ಯೆ ನೇರ ರೈಲು ವ್ಯವಸ್ಥೆ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ। ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವಿ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ಮಂಗಳೂರು ಮತ್ತು ಅಯೋಧ್ಯೆ ನಡುವೆ ನೇರ ರೈಲು ವ್ಯವಸ್ಥೆ ಆರಂಭಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Comments are closed.