Belagavi: ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಯುವ ರೈತ ಆತ್ಮಹತ್ಯೆ!

Belagavi: ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (belagavi) ಜಿಲ್ಲೆಯ ಸುರೇಬಾನದ ಸಂಗಳ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ರೈತ ಶಿವನಗೌಡ ಬಸನಗೌಡ ಪಾಟೀಲ (28) ಎಂದು ಗುರುತಿಸಲಾಗಿದೆ. ವಯಸ್ಸಾದರೂ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಸಂಬಂಧಿಕರು ಕೂಡ ಮದುವೆ ಯಾವಾಗ ಎಂದು ಸದಾ ಕೇಳುತ್ತಿದ್ದ ಕಾರಣ ಮನನೊಂದ ಶಿವನಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: MUDA Case: ʼಮುಡಾʼ ಕೇಸ್: ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ
Comments are closed.