Rajanna Honeytrap Case: ರಾಜಣ್ಣ ಹನಿಟ್ರ್ಯಾಪ್‌ ಆರೋಪ ಪ್ರಕರಣ: ಸರಕಾರಕ್ಕೆ ಸಿಐಡಿ ವರದಿ ಸಲ್ಲಿಕೆ, ವರದಿಯಲ್ಲೇನಿದೆ?

Share the Article

Rajanna Honeytrap Case: ತಮ್ಮ ಮೇಲೆ ಹನಿಟ್ರ್ಯಾಪ್‌ ಯತ್ನ ಆಗಿದೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಆರೋಪ ನಿರಾಧಾರ, ಇದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ. ಈ ಮೂಲಕ ಹನಿಟ್ರ್ಯಾಪ್‌ ಯತ್ನ ವಿವಾದ ತಾರ್ಕಿಕ ಅಂತ್ಯ ಕಂಡಿದೆ.

ಈ ಪ್ರಕರಣದ ಕುರಿತು ವಿಚಾರಣೆ ಮಾಡಿದ ಸಿಐಡಿ ಅಧಿಕಾರಿಗಳು ಈ ಆರೋಪದಲ್ಲಿ ಹುರುಳಿಲ್ಲವೆಂದು ಷರಾ ಬರೆದು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

Comments are closed.