ಹೆಂಡತಿಗೆ ಕೋವಿಡ್ ಪಾಸಿಟಿವ್ ಬಂತೆಂದು ಹೆದರಿದ ಗಂಡ ನೇಣು ಬಿಗಿದು ಆತ್ಮಹತ್ಯೆ..!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಮಡದಿಗೆ ಕೊರೋನಾ ಪಾಸಿಟಿವ್ ಬಂತೆಂದು ಹೆದರಿದ ಗಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

ರಂಗನಾಥಪುರ ನಿವಾಸಿ ರಾಜು (32 ವ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನ ಪತ್ನಿ ರಶ್ಮಿಗೆ ಮೇ.27 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಅಂದು ಸಂಜೆ ರಶ್ನಿ ಅವರನ್ನು ದೇವರಕೊಟ್ಟ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಆದರೆ ರಾಜು ವರದಿ ನೆಗೆಟಿವ್ ಆಗಿತ್ತು. ಇದರಿಂದ ಗಾಬರಿಗೊಂಡು ಪತಿ ರಾಜು ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave A Reply

Your email address will not be published.