Mysore: ಸೆ.1ರಂದು ರಾಷ್ಟ್ರಪತಿ ದೌಪದಿ ಮುರ್ಮು ಮೈಸೂರಿಗೆ ಭೇಟಿ!

Mysore: ರಾಷ್ಟ್ರಪತಿ ದೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ.

ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ. ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ.
Comments are closed.