ಕಳೆಂಜ ಸ್ವಸಹಾಯ ಸಂಘಗಳಿಗೆ ಲಾಭಾಂಶ ಹಂಚಿಕೆ

ಕಳೆಂಜ : ಕಳೆಂಜದ ಕಾಯಾರ್ತಡ್ಕ ವಿಭಾಗದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಲಾಭಾಂಶ ವಿತರಣಾ ಕಾರ್ಯಕ್ರಮ ಶುಕ್ರವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕದಲ್ಲಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಜನಜಾಗೃತಿ ವೇದಿಕೆ ಸದಸ್ಯ ವಿಜಯಕುಮಾರ್ ಲಾಭಾಂಶ ವಿತರಣಾ ಚೆಕ್ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಜಯಕರ ಶೆಟ್ಟಿ, ಮೇಲ್ವಿಚಾರಕ ಪ್ರಶಾಂತ್, ಸೇವಾಪ್ರತಿನಿಧಿ ಜನಾರ್ದನ ಹಾಗೂ ಅರ್ಪಿತಾ, ಒಕ್ಕೂಟದ ಅಧ್ಯಕ್ಷ ಚಿನ್ನಮ್ಮ ಮತ್ತು ಕೊರಗಪ್ಪ ಗೌಡ ಉಪಸ್ಥಿತರಿದ್ದರು. ಒಟ್ಟು 46 ಸಂಘಳಿಗೆ 13 ಲಕ್ಷದ 27 ಸಾವಿರದ 845 ರೂಪಾಯಿ ಲಾಭಾಂಶ ವಿತರಣೆ ಮಾಡಲಾಯಿತು.

Leave A Reply

Your email address will not be published.