ಅಪಘಾತದ ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Share the Article
ವಿನೀತ್ ಕಲ್ಲಪಳ್ಳಿ

ಸುಳ್ಯ: ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯ ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾದ ಘಟನೆ ಅಲೆಟ್ಟಿಯ ಕುಡೆಕಲ್ಲು ಎಂಬಲ್ಲಿ ನಡೆದಿತ್ತು.

ಘಟನೆಯಲ್ಲಿ ಬೈಕ್ ಸವಾರ ಎಂ.ಎ.ವಿದ್ಯಾರ್ಥಿ ವಿನೀತ್ ಕಲ್ಲಪಳ್ಳಿ ಅವರು ಬೈಕ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

ಅವರನ್ನು ತಕ್ಷಣ ಅವರನ್ನು 108 ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗ ಸಾಗಿಸಲಾಯಿತು. ಬೆನ್ನು ಮೂಳೆಗೆ ವಿಪರೀತ ಗಾಯಗೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Leave A Reply

Your email address will not be published.