Ganesh Chaturthi: ಗಣೇಶ ಚತುರ್ಥಿ ಪ್ರಯುಕ್ತ: ಬೆಂಗಳೂರಿನಲ್ಲಿ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Ganesh Chaturthi: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಾದ್ಯಂತ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶ ಮಾಡಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ.

ಕಸಾಯಿಖಾನೆಗಳು, ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಗಣೇಶ ಹಬ್ಬದಂದು ಪರಿಸರಕ್ಕೆ ಹಾನಿಯುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳನ್ನು ಬಳಸದೆ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆಚರಿಸಲು ಹಾಸ್ಯ ನಟರಾದ ಪುಷ್ಪ ರಾಜ್ ಬೊಳ್ಳರ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.#BBMP #GaneshChaturthi2025 #ganeshfestival #SuFromSo pic.twitter.com/fnHlpUJk4N
— Bruhat Bengaluru Mahanagara Palike (@BBMPofficial) August 25, 2025
Comments are closed.