Weather Report: ನಾಳೆ ಬೆಳಿಗ್ಗೆವರೆಗೆ ಕರ್ನಾಟಕದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆಯಾಗಲಿದೆ? ಬಂಗಾಳಕೊಲ್ಲಿಯ ವಾಯುಭಾರ ಎತ್ತ ಸಾಗಿತು?

Share the Article

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಉತ್ತರ ಕನ್ನಡ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 29ರ ತನಕ ಇದೇ ವಾತಾವರಣ ಮುಂದುವರಿಯ ಸಾಧ್ಯತೆಗಳಿದ್ದು, 30ರಿಂದ ಮಳೆ ಸ್ವಲ್ಪ ಕಡಿಮೆಯಾದರೂ ಸಾಮಾನ್ಯ ಮಳೆ ಸೆಪ್ಟೆಂಬರ್ 4ರ ತನಕ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ ಈ ಮಳೆಯು 29ರ ತನಕ ಇರುವ ಸಾಧ್ಯತೆಗಳಿದ್ದು, 30ರಿಂದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಒಂದೆರಡು ಕಡೆ ಸಾಮಾನ್ಯ ಮಳೆ ಇರಬಹುದು.

ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 29ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಆಗಸ್ಟ್ 31ರ ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಸ್ಸಾ ದಿಂದ, ಮಧ್ಯಪ್ರದೇಶ, ಮಹಾರಾಷ್ಟ್ರ ತನಕ ವ್ಯಾಪಿಸಿದ್ದು, ಸೆಪ್ಟೆಂಬರ್ 3, 4ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ.

Donald trump: ಉಕ್ರೇನ್-ರಷ್ಯಾ ನಿಲ್ಲದ ಯುದ್ಧ: ‘ನಾನು ನಿರ್ಬಂಧಗಳನ್ನು ವಿಧಿಸುವೆ! – ಕುಪಿತಗೊಂಡ ಟ್ರಂಪ್‌

Comments are closed.