Dasara Festival: ದಸರಾ ಪ್ರಯುಕ್ತ ನೈಯುತ್ಯ ರೈಲ್ವೆಯಿಂದ ವಿಶೇಷ ರೈಲು: ಇಲ್ಲಿದೆ ಸಂಪೂರ್ಣ ವಿವರ

Dasara Festival: ನಾಡಹಬ್ಬ ದಸರಾ ಬರಲಿದೆ. ಪ್ರಯಾಣಿಕರ ಹೆಚ್ಚಳ ಜಾಸ್ತಿಯಾಗುವುದರಿಂದ ನೈರುತ್ಯ ರೈಲ್ವೆ ಮುಂದಾಗಿದ್ದು, ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್ನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಿದ್ದು, ಸಂಪೂರ್ಣ ವೇಳಾಪಟ್ಟಿ ಇಲ್ಲಿ ನೀಡಲಾಗಿದೆ.

ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು (1ಟ್ರಿಪ್)
ರೈಲು ಸಂಖ್ಯೆ (06249) ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30 ರಂದು ಮಧ್ಯಾಹ್ನ 12 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 05:30 ಗಂಟೆಗೆ ಮಡಗಾಂವ್ ತಲುಪಲಿದೆ. ಮತ್ತೆ ಮರಳುವಾಗ, ರೈಲು ಸಂಖ್ಯೆ (06250) ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1 ರಂದು ಬೆಳಿಗ್ಗೆ 06:30 ಗಂಟೆಗೆ ಮಡಗಾಂವ್ನಿಂದ ಹೊರಟು, ಅದೇ ದಿನ ರಾತ್ರಿ 11:40 ಗಂಟೆಗೆ ಯಶವಂತಪುರ ತಲುಪಲಿದೆ.
ಈ ರೈಲು 16 ಬೋಗಿಗಳನ್ನು (10 ಸ್ವೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿದೆ.
Kindly note:
To clear the extra rush of passengers during the Dasara festival, South Western Railway will run one round trip of the following special trains.
ಪ್ರಮುಖ ಹಬ್ಬಗಳಲ್ಲಿ ಒಂದಾದ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಒಂದು ಟ್ರಿಪ್ ಈ… pic.twitter.com/aSxyQXe4ry— South Western Railway (@SWRRLY) September 11, 2025
ಈ ರೈಲು ಎರಡು ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಬಂಟವಾಳ, ಸುರೆತ್ತಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರದಲ್ಲಿ ನಿಲುಗಡೆ ಹೊಂದಲಿದೆ.
ರೈಲು ಸಂಖ್ಯೆ 06291/06292 ಎಸ್ಎಂವಿಟಿ ಬೆಂಗಳೂರು-ಬೀದರ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ (1 ಟ್ರಿಪ್)
ರೈಲು ಸಂಖ್ಯೆ (06291) ಎಸ್ಎಂವಿಟಿ ಬೆಂಗಳೂರು-ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು ಸೆಪ್ಟೆಂಬರ್ 30ರಂದು ರಾತ್ರಿ 09:15 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:30 ಗಂಟೆಗೆ ಬೀದರ್ ತಲುಪಲಿದೆ. ಮತ್ತೆ ಮರಳುವಾಗ, ರೈಲು ಸಂಖ್ಯೆ (06292) ಬೀದರ್-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 1ರಂದು ಮಧ್ಯಾಹ್ನ 01 ಗಂಟೆಗೆ ಬೀದರ್ನಿಂದ ಹೊರಟು, ಮರುದಿನ ಬೆಳಿಗ್ಗೆ 04 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲು 22 ಬೋಗಿಗಳನ್ನು (20 ಸ್ಲಿಪರ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು) ಒಳಗೊಂಡಿರುತ್ತದೆ.
ಈ ರೈಲು ಎರಡು ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ ಮತ್ತು ಹುಮನಾಬಾದ್ನಲ್ಲಿ ನಿಲುಗಡೆಗೊಳ್ಳಲಿದೆ.
ಈ ಬಗ್ಗೆ ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ, ಹತ್ತಿರದ ರೈಲು ನಿಲ್ದಾಣದ ವಿಚಾರಣಾ ಕೇಂದ್ರಕ್ಕೆ ಭೇಟಿ ನೀಡಬಹುದು, ಅಥವಾ ಅಧಿಕೃತ ವೆಬ್ಸೈಟ್ ಪರಿಶೀಲಿಸಬಹುದು ಅಥವಾ ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಿದರೆ ತಿಳಿಯಬಹುದು.
ಹುಬ್ಬಳ್ಳಿ ಟು ಬೆಂಗಳೂರು ವಿಶೇಷ ರೈಲನ್ನು ಚಾಮರಾಜನಗರದವರೆಗೆ ವಿಸ್ತರಣೆ
ರೈಲು ಸಂಖ್ಯೆ (07339) ಎಸ್ಎಸ್ಎಸ್ ಹುಬ್ಬಳ್ಳಿ ಟು ಕೆಎಸ್ಆರ್ ಬೆಂಗಳೂರು ವಿಶೇಷ ರೈಲು ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದವರೆಗೆ ವಿಸ್ತರಣೆಯಾಗಲಿದೆ.
ರೈಲು ಸಂಖ್ಯೆ (07340) ಕೆಎಸ್ಆರ್ ಬೆಂಗಳೂರು ಟು ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಅಕ್ಟೋಬರ್ 5ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದಿಂದ ಹೊರಡಲಿದೆ.
ಹುಬ್ಬಳ್ಳಿ ಮತ್ತು ಯಶವಂತಪುರ ಟು ಹುಬ್ಬಳ್ಳಿ ನಡುವಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ರೈಲು ಸಂಖ್ಯೆ (07339) ಕೆಎಸ್ಆರ್ ಬೆಂಗಳೂರಿನಿಂದ ಬೆಳಿಗ್ಗೆ 07 ಗಂಟೆಗೆ ಹೊರಟು ಮಧ್ಯಾಹ್ನ 12:15 ಗಂಟೆಗೆ ಚಾಮರಾಜನಗರ ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ (07340) ಚಾಮರಾಜನಗರದಿಂದ ಸಂಜೆ 06:45 ಗಂಟೆಗೆ ಹೊರಟು ರಾತ್ರಿ 11:45 ಗಂಟೆಗೆ ಕೆಎಸ್ಆರ್ ಬೆಂಗಳೂರು ಆಗಮಿಸಲಿದೆ.
ಎರಡು ರೈಲುಗಳು ಕೆಂಗೇರಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಪಾಂಡವಪುರ, ಮೈಸೂರು, ಚಾಮರಾಜಪುರಂ, ಅಶೋಕಪುರಂ, ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಪುರಂ ಹಾಲ್ಟ್ ಮತ್ತು ನಂಜನಗೂಡು ಟೌನ್ನಲ್ಲಿ ನಿಲುಗಡೆ ಹೊಂದಲಿದೆ.
ಇದನ್ನೂ ಓದಿ:Viral Video: ಆಟ ಆಡುತ್ತಿರುವಾಗಲೇ ಶಾಲೆಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿ, ಸಾವು
ಈ ವಿಶೇಷ ರೈಲು ಸೇವೆಯ ವಿಸ್ತರಣೆಯಿಂದಾಗಿ ಹುಬ್ಬಳ್ಳಿ ಬೆಂಗಳೂರು, ಮೈಸೂರು ಮತ್ತು ಚಾಮರಾಜನಗರ ನಡುವೆ ನೇರ ಸಂಪರ್ಕ ಕಲ್ಪಿಸಲಾಗಿದ್ದು, ದಸರಾ ಸಂದರ್ಭದಲ್ಲಿ ಮೈಸೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
Comments are closed.