Thawar Chand Gehlot: ಸರ್ಕಾರದ 32 ಮಸೂದೆಗಳಿಗೆ ರಾಜ್ಯಪಾಲರ ಸಹಿ

Share the Article

Thawar Chand Gehlot: ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿದಂತೆ 32 ಮಸೂದೆಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಸಹಿ ಹಾಕಿದ್ದಾರೆ.

ಈಗಾಗಲೇ ಸರ್ಕಾರ 37 ಮಸೂದೆಗಳನ್ನು ರಾಜ್ಯಪಾಲರಿಗೆ ಕಳಿಸಿತ್ತು. ಈ ಪೈಕಿ 32 ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಅಂತೆಯೇ ರಾಜ್ಯಪಾಲರು ಅನುಮೋದಿಸಿದ ಮಸೂದೆಗಳು ಕಾಯ್ದೆಗಳಾಗಿ ಜಾರಿಯಾಗಲಿವೆ. ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ:Government employees: ರಾಜ್ಯ ಸರ್ಕಾರಿ ನೌಕರರಿಗೆ ‘ಸಂಬಳ ಪ್ಯಾಕೇಜ್’ನಲ್ಲಿ ನೋಂದಾಯಿಸಿಕೊಳ್ಳಲು ಕಾಲಾವಧಿ ವಿಸ್ತರಣೆ

ಇನ್ನು ರಾಷ್ಟ್ರಪತಿಗಳ ಅಂಗಳಕ್ಕೆ ರಾಜ್ಯದ ಮೂರು ಮಸೂದೆಗಳನ್ನು ರಾಜ್ಯಪಾಲರು ಕಳುಹಿಸಿದ್ದಾರೆ. ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ- 2025, ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಮಸೂದೆ- 2025, ನೋಂದಣಿ ಮಸೂದೆ-2025 ಮಸೂದೆಗಳು ರಾಷ್ಟ್ರಪತಿಗಳ ಬಳಿಗೆ ಹೋಗಿವೆ.

Comments are closed.