Karnataka: ಸರ್ಕಾರಿ ಕಚೇರಿಗಳಲ್ಲಿ ನಾಳೆ `ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಆಚರಣೆ ಕಡ್ಡಾಯ: ಸರ್ಕಾರದಿಂದ ಆದೇಶ

Karnataka: ಅಕ್ಟೋಬರ್ 07, 2025 ರಂದು ಬೆಳಗ್ಗೆ 10 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.
Comments are closed.