BBK 12: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಬಂದ್ ಆಗುತ್ತಾ? ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

Share the Article

BBK 12: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ರಿಯಾಲಿಟಿ ಶೋ ಬಂದ್‌ ಆಗುತ್ತಾ ಎನ್ನುವ ಪ್ರಶ್ನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ರಾಮನಗರದ ಅಧಿಕಾರಿಗಳು ಹಿಂದೆಯೇ ನೋಟಿಸ್​ ಕೊಟ್ಟಿದ್ದಾರೆ. 2024ರ ಮಾರ್ಚ್​ನಲ್ಲೇ ನೋಟಿಸ್​ ನೀಡಲಾಗಿತ್ತು. ಪರಿಶೀಲನೆ ವೇಳೆ ಪರವಾನಗಿ ಪಡೆದಿಲ್ಲ ಎಂಬ ಮಾಹಿತಿ ಬಂದಿದೆ. ಸ್ಟುಡಿಯೋದವರು ಪರವಾನಗಿ ಪಡೆದಿಲ್ಲ, ಅರ್ಜಿಯನ್ನೂ ಹಾಕಿಲ್ಲ. ನೋಟಿಸ್​ ಕೊಟ್ಟರೂ ಅಮ್ಯೂಸ್​ಮೆಂಟ್​ ಪಾರ್ಕ್ ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಕೋರ್ಟ್ ಮೊರೆ ಹೋಗಲು ಎಲ್ಲರಿಗೂ ಅವಕಾಶ ಇದೆ. ಕಾನೂನು ರೀತಿ ಏನು ಕ್ರಮ ವಹಿಸಬೇಕೋ ಅದನ್ನು ವಹಿಸಲಿ’ ಎಂದಿದ್ದಾರೆ ಸಚಿವ ಈಶ್ವರ ಖಂಡ್ರೆ.

ಇದನ್ನೂ ಓದಿ;BBK 12: ಜಾಲಿವುಡ್‌ ಸ್ಟುಡಿಯೋಸ್‌ ಬೀಗ ಹಾಕಿದ ಅಧಿಕಾರಿಗಳು, ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಸ್ಥಗಿತ?

Comments are closed.