Bigg Boss Kannada ವೀಕ್ಷಕರಿಗೆ ಸಿಹಿ ಸುದ್ದಿ: ದೊಡ್ಮನೆ ಮತ್ತೆ ಓಪನ್-ಡಿ.ಕೆ.ಶಿವಕುಮಾರ್ ಆದೇಶ

BBK 12: ಬಿಗ್ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಓಪನ್ ಆಗಲಿದೆ. ಮಾಲಿನ್ಯ ನಿಯಂರಣ ಮಂಡಳಿಯು ನೀಡಿದ ನೋಟಿಸ್ ಪ್ರಕಾರ ಅ.7 ರಂದು ಬೀಗ ಹಾಕಲಾಗಿತ್ತು, ಅದನ್ನು ತೆರವು ಮಾಡಲು ಜಿಲ್ಲಾಧಿಕಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.

I have directed the Deputy Commissioner of Bengaluru South District to lift the seal on Jollywood premises in Bidadi, where Bigg Boss Kannada is being filmed.
While environmental compliance remains a top priority, the studio will be given time to address violations in accordance…
— DK Shivakumar (@DKShivakumar) October 8, 2025
ಬಿಗ್ ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ಅನ್ನು ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು ನಿರ್ದೇಶನ ನೀಡಿದ್ದೇನೆ.
ಪರಿಸರ ಅನುಸರಣೆ ಪ್ರಮುಖ ಆದ್ಯತೆಯಾಗಿ ಉಳಿದಿದ್ದರೂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಉಲ್ಲಂಘನೆಗಳನ್ನು ಪರಿಹರಿಸಲು ಸ್ಟುಡಿಯೋಗೆ ಸಮಯ ನೀಡಲಾಗುವುದು.
ಪರಿಸರ ಸಂರಕ್ಷಣೆಯ ಬಗ್ಗೆ ನಮ್ಮ ಜವಾಬ್ದಾರಿಯನ್ನು ಎತ್ತಿಹಿಡಿಯುವುದರ ಜೊತೆಗೆ ಕನ್ನಡ ಮನರಂಜನಾ ಉದ್ಯಮವನ್ನು ಬೆಂಬಲಿಸಲು ನಾನು ಬದ್ಧನಾಗಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Comments are closed.