CM Siddaramaiah: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಶಾಕಿಂಗ್ ಹೇಳಿಕೆ ನೀಡಿದ ಸಿಎಂ

CM Siddaramaiah: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಅಧಿಕಾರ ಹಂಚಿಕೆ ಕುರಿತು ಚರ್ಚೆ ಮತ್ತೆ ಮುನ್ನಲೆಗೆ ಬಂದಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಶಾಸಕರ ಅಭಿಪ್ರಾಯ ಇಲ್ಲದೇ ಸಿಎಂ ಆಗೋಕೆ ಆಗಲ್ಲ. ಬಹುಮತ ಇದ್ದರೆ ಮಾತ್ರ ಸಿಎಂ ಆಗಲು ಸಾಧ್ಯ ಎಂದು ಹೇಳಿದ್ದಾರೆ.

ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ಆಶೀರ್ವಾದ ಎರಡೂ ಮುಖ್ಯ. ಶಾಸಕರ ಅಭಿಪ್ರಾಯ, ಹೈಕಮಾಂಡ್ ಆಶೀರ್ವಾದ ಇದ್ದರೆ ಮಾತ್ರ ಸಿಎಂ ಆಗಲು ಸಾಧ್ಯ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಅಚ್ಚರಿಯ ಹೇಳಿಕೆ ನೀಡಿರುವುದು ನಿಜಕ್ಕೂ ರಾಜಕೀಯ ಬದಲಾವಣೆ ಆಗಲಿದೆಯೇ ಎನ್ನುವುದು ಕಾದು ನೋಡಬೇಕಿದೆ.
ಇದನ್ನೂ ಓದಿ:Belthangady: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ: ಚಿನ್ನಯ್ಯ ಪತ್ನಿ ನಂತರ ಸಹೋದರಿ ವಿಚಾರಣೆಗೆ ಹಾಜರು
Comments are closed.