Udupi: ಬಾರ್ಕೂರಿನಲ್ಲಿ ಮಾಜಿ ಶಾಸಕರ ಪುತ್ರ ರೈಲಿಗೆ ತಲೆ ಕೊಟ್ಟು ಸಾವು

Share the Article

Udupi: ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಶಾಸಕರ ಪುತ್ರ ಆಗಿರುವ ಸುದೀಪ್‌ ಅವರು ಹೆಬ್ರಿ ತಾಲೂಕು ನಿವಾಸಿ. ಸುದೀಪ್‌ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

1999 ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು ಸುದೀಪ್‌ ತಂದೆ ಹೆಚ್‌.ಗೋಪಾಲ್‌ ಭಂಡಾರಿ ಅವರು. ನಂತರ 2008 ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ.

Comments are closed.