C M Siddaramaiah: ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ-ಸಿಎಂ ಸ್ಪಷ್ಟನೆ

Mysore: ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದೆ. ಇದರಲ್ಲಿ ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕುಂದಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನದ ಕುರಿತು ಗೊಂದಲದ ಕುರಿತು ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರಕಾರ ಆದೇಶ ಹೊರಡಿಸಿದೆ. ನಮ್ಮ ಸರಕಾರವೂ ಆದೇಶವನ್ನು ಹೊರಡಿಸಿದೆ.
ಬಿಜೆಪಿ ಸರಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರಕಾರ ಯಾವುದೇ ನಿಗದಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ ಎಂದರು.
Comments are closed.