Mangalore: ಸುರತ್ಕಲ್: ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಬಂಧನ

Share the Article

Mangalore: ಮಂಗಳೂರು (Mangalore) ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅ.24ರಂದು, ಪೊಲೀಸರು ಆರೋಪಿಗಳಾದ ಸುಶಾಂತ್, ಅಲೆಕ್ಸ್, ನಿತಿನ್ ಮತ್ತು ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇಲೆ ಅರುಣ್ ಶೆಟ್ಟಿಯನ್ನು ಬಂಧಿಸಿದ್ದರು.

Comments are closed.