Narendra modi: ನ. 28ಕ್ಕೆ ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ


Narendra modi: ನ.28ರಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ ನಾಲ್ಕನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (narendra modi ) ಅವರಿಗೆ ಆಹ್ವಾನ ನೀಡಲಾಗಿದೆ. ಅದರಂತೆ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ನ.28ರಂದು ನಡೆಯುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮೂಲಗಳು ತಿಳಿಸಿವೆ. ಪ್ರಧಾನಿ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆಯುವರಲ್ಲದೇ, ಗೀತಾ ಮಂದಿರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ ಎಂದು ತಿಳಿದುಬಂದಿದೆ.
Comments are closed.