Home News Yatnal: ನಾನು ಬಿಜೆಪಿಗೆ ವಾಪಸ್ ಬರುತ್ತೇನೆ, ಆದ್ರೆ ಸಿಎಂ ಮಾಡೋದಾದ್ರೆ ಮಾತ್ರ – ಬಸವನಗೌಡ ಪಾಟೀಲ್...

Yatnal: ನಾನು ಬಿಜೆಪಿಗೆ ವಾಪಸ್ ಬರುತ್ತೇನೆ, ಆದ್ರೆ ಸಿಎಂ ಮಾಡೋದಾದ್ರೆ ಮಾತ್ರ – ಬಸವನಗೌಡ ಪಾಟೀಲ್ ಯತ್ನಾಳ್ ಕಂಡೀಶನ್

Hindu neighbor gifts plot of land

Hindu neighbour gifts land to Muslim journalist

Yatnal: ಬಿಜೆಪಿ ಉಚ್ಛಾಟಿತ ಶಾಸಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಗೆ ಮರಳಿ ಬರುವ ಕುರಿತು ಮಾತನಾಡಿದ್ದಾರೆ. ಆದರೆ ಅದಕ್ಕೆ ಒಂದು ಕಂಡೀಶನ್ ಕೂಡ ಹಾಕಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ “ಬಿಜೆಪಿಗೆ ವಾಪಾಸ್ ಬನ್ನಿ ಎಂದು ನನಗೆ ಆಹ್ವಾನ ನೀಡಿದ್ದಾರೆ. ಆದರೆ ನನ್ನನ್ನು ಮುಖ್ಯಮಂತ್ರಿ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಾಸ್ ಹೋಗುತ್ತೇನೆ” ಎಂದು ಹೊಸ ಬೇಡಿಕೆ ಇಟ್ಟಿದ್ದಾರೆ.

ಅಲ್ಲದೆ ಸ್ವತಃ ಆರ್.ಅಶೋಕ್ ಅವರೇ ನನ್ನನ್ನು ಚೇಂಬರ್ ಗೆ ಕರೆದು ಮಾತನಾಡಿದರು. ಯತ್ನಾಳ್ ಅವರೇ ನೀವು ಬಿಜೆಪಿಗೆ ವಾಪಾಸ್ ಆಗಲೇಬೇಕು. ಬಿಜೆಪಿ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ನೀವು ಪಕ್ಷಕ್ಕೆ ಮರಳಿ ಬನ್ನಿ ಎಂದಿದ್ದಾರೆ. ಆದರೆ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ಮರಳಿ ಬರುತ್ತೇನೆ. ದೆಹಲಿಗೆ ನಿಯೋಗದೊಂದಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿಯಾಗುವ ಕುರಿತೂ ಚರ್ಚೆ ನಡೆಸಲಾಯಿತು. ಏನೇ ಇದ್ದರೂ ನಾನು ಸುಮ್ಮನೇ ಬಿಜೆಪಿಗೇ ಹೋಗಲ್ಲ. ನನ್ನನ್ನು ಸಿಎಂ ಮಾಡ್ತಾರೆ ಅನ್ನುವುದಾದರೆ ಮಾತ್ರ ಹೋಗುತ್ತೇನೆ. ಇಲ್ಲವಾದಲ್ಲಿ ನಾವೇ ಜೆಸಿಬಿ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದರು.