KSRTC: ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್ಗಳು


KSRTC: ಕ್ರಿಸ್ಮಸ್ ಹಿನ್ನೆಲೆ ಊರುಗಳಿಗೆ, ಪ್ರವಾಸಕ್ಕೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಗುಡ್ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಮತ್ತು 24ರಂದು ಹೆಚ್ಚುವರಿಯಾಗಿ 1,000 ಬಸ್ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ವಿಶೇಷ ಬಸ್ಗಳ ಸಂಚಾರ ನಡೆಯಲಿದ್ದು, ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಕ್ರಿಸ್ಮಸ್ ಹಬ್ಬ ಮುಗಿದ ಬಳಿಕವೂ ವಿಶೇಷ ಬಸ್ಗಳ ಕಾರ್ಯಾಚರಣೆ ನಡೆಯಲಿದ್ದು, ಡಿ.26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವ್ಯವಸ್ಥೆ ಇದೆ.
ರಾಜ್ಯ ಹಾಗೂ ಅಂತಾರಾಜ್ಯದಿಂದಲೂ ಕೆಎಸ್ಆರ್ಟಿಸಿ ಬಸ್ಗಳು ಲಭ್ಯ ಇವೆ ಎಂದು KSRTC ತಿಳಿಸಿದೆ.ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್)ದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್)ದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಯ ಬಸ್ಗಳು ತೆರಳಲಿವೆ.ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Comments are closed.