

ಶಿಡ್ಲಘಟ್ಟ (ಚಿಕ್ಕಬಳ್ಳಾಪುರ ಜಿಲ್ಲೆ): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ-ಜಿ.ಅಮೃತಾ ಅವರಿಗೆ ಧಮ್ಮಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಅವರನ್ನು ಹೆಚ್ಚಿನ ವಿಚಾರಣೆಗೆ 2 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಶಿಡ್ಲಘಟ್ಟದ ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದ್ದು, ಜ.30ರಂದು ಶುಕ್ರವಾರಕ್ಕೆ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.
ಕೇರಳದ ಗಡಿಯಲ್ಲಿ ರಾಜೀವ್ ಗೌಡರನ್ನು ಬಂಧಿಸಿದ್ದ ಪೊಲೀಸರು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಜ.9 ರವರೆಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ನ್ಯಾಯಾಲಯವು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬುಧವಾರ ಆದೇಶಿಸಿದೆ.
ನ್ಯಾಯಾಧೀಶರು ನೆನ್ನೆ ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರಾದರೂ ಇಂದು ಪೊಲೀಸರ ವಶಕ್ಕೆ ನೀಡಿ ಜೆಎಂಎಫ್ಸಿ ನ್ಯಾಯಾಲಯದ ನ್ಯಾ.ಮೊಹಮ್ಮದ್ ರೋಷನ್ ಷಾ ಆದೇಶಿಸಿದರು.
.













