

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಹಾಗೂ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ಜಾಹೀರಾತುಗಳನ್ನು ತೆರವು ಮಾಡಲು 15 ದಿನಗಳ ಗಡುವು ನೀಡಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆಯ ಮೇರೆಗೆ ಕೆಎಸ್ಆರ್ಟಿಸಿಯ ಎಲ್ಲಾ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕ ಎಸ್ ರಾಜೇಶ್ ಸೂಚನೆ ನೀಡಿದ್ದಾರೆ.
ಫೆ.15ರೊಳಗೆ ತೆರವು ಮಾಡಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು. ಈ ಕುರಿತು ಅನುಸರಣಾ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಈ ತರಹದ ಜಾಹೀರತುಗಳನ್ನು ಅಳವಡಿಸಬಾರದು/ಪ್ರದರ್ಶಿಸಬಾರದು ಎಂದು ತಿಳಿಸಿದ್ದಾರೆ.













