

ಬೆಳ್ತಂಗಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬ ವಿಷಯಗಳನ್ನು ಪ್ರತಿಪಾದಿಸಿದ್ದಾರೆ.
ಬಜೆಟ್ ರೈತರು ಮತ್ತು ಬಡವರ ಪರವಾಗಿದ್ದು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣಕಾಸು ಮೀಸಲಿಟ್ಟಿದೆ. ಆರೋಗ್ಯ, ಶಿಕ್ಷಣ, ಹಾಗೂ ಆಯುರ್ವೇದ ಮತ್ತು ತರಬೇತಿ ಬಗ್ಗೆ ವಿಶೇಷ ಒತ್ತು ನೀಡಿರುವುದು ಸ್ವಾಗತಾರ್ಹವಾಗಿದೆ. ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿರವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.













