Home News Dharwada : ಅಜ್ಜಿಯ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವು !!

Dharwada : ಅಜ್ಜಿಯ ಅಂತ್ಯ ಸಂಸ್ಕಾರ ನಡೆಸಿ ಮನೆಗೆ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವು !!

Hindu neighbor gifts plot of land

Hindu neighbour gifts land to Muslim journalist

Dharwada : ಧಾರವಾಡದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಅಜ್ಜಿಯ ಅಂತ್ಯಸಂಸ್ಕಾರ ನಡೆಸಿ ಮನೆಗೆ ತೆರಳುತ್ತಿದ್ದ ಮೊಮ್ಮಗರು ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಧಾರವಾಡ ನಗರದ ನಿವಾಸಿಯಾದ ವಿನಾಯಕ ಸುಳ್ಳದ (23) ಮೃತಪಟ್ಟ ದುರ್ದೈವಿ. ಇದೀಗ ಅಜ್ಜಿಯ ಅಗಲಿಕೆಯ ನೋವಿನಲ್ಲಿದ್ದ ಕುಟುಂಬಕ್ಕೆ ಈಗ ಮೊಮ್ಮಗನ ಸಾವಿನ ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ

ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕ್ ನಲ್ಲಿ ಸುಳ್ಳ ಗ್ರಾಮಕ್ಕೆ ಹೋಗಿದ್ದ ವಿನಾಯಕ ಅಂತಿಮ ವಿಧಿವಿಧಾನ ಮುಗಿದ ನಂತರ ಧಾರವಾಡಕ್ಕೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ವೇಗವಾಗಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ವಿನಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ದಿನ ಅಜ್ಜಿ, ಮೊಮ್ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.