Home latest Supreme Court : ‘ಭಾರತ ಬಿಟ್ಟು ತೊಲಗಿ’ – ವಾಟ್ಸಪ್ ಗೆ ಸುಪ್ರೀಂ ಕೋರ್ಟ್ ತರಾಟೆ

Supreme Court : ‘ಭಾರತ ಬಿಟ್ಟು ತೊಲಗಿ’ – ವಾಟ್ಸಪ್ ಗೆ ಸುಪ್ರೀಂ ಕೋರ್ಟ್ ತರಾಟೆ

Hindu neighbor gifts plot of land

Hindu neighbour gifts land to Muslim journalist

Supreme Court : ಭಾರತದ ಸುಪ್ರೀಂ ಕೋರ್ಟ್, ವಾಟ್ಸಾಪ್‌ನ 2021ರ ಗೌಪ್ಯತಾ ನೀತಿ ವಿಚಾರವಾಗಿ ಮೆಟಾ ಸಂಸ್ಥೆಯನ್ನು ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಸಾಧ್ಯವಾಗದಿದ್ದರೆ ಭಾರತವನ್ನು ಬಿಟ್ಟು ತೊಲಗಿ ಎಂದು ಖಾರವಾಗಿ ಹೇಳಿದೆ. 

ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠ ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ. ಅಲ್ಲದೆ “ನೀವು ನಮ್ಮ ಸಂವಿಧಾನವನ್ನು ಪಾಲಿಸಲು ಸಾಧ್ಯವಿಲ್ಲ ಎಂದರೆ ಭಾರತದಿಂದ ನಿರ್ಗಮಿಸಿ. ಭಾರತೀಯ ಪ್ರಜೆಯ ಒಂದು ಡಿಜಿಟ್ ದತ್ತಾಂಶವನ್ನೂ ಪಡೆಯಲು ನಾವು ಅವಕಾಶ ನೀಡುವುದಿಲ್ಲ” ಎಂದು ಮೆಟಾಗೆ ಖಡಕ್ ಸಂದೇಶ ನೀಡಿತು.

ಜೊತೆಗೆ ವಾಟ್ಸಾಪ್ ತನ್ನ ಗೌಪ್ಯತಾ ನೀತಿಯ ಹೆಸರಿನಲ್ಲಿ ಬಳಕೆದಾರರ ದತ್ತಾಂಶವನ್ನು ವಾಣಿಜ್ಯ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮೆಟಾಗೆ ಎಚ್ಚರಿಕೆ ನೀಡಿದ ಸಿಜೆಐ, ಗೌಪ್ಯತೆ ಭಾರತದ ನಾಗರಿಕರ ಮೂಲಭೂತ ಹಕ್ಕು ಎಂದು ಪುನರುಚ್ಚರಿಸಿದರು.ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಯಾವುದೇ ರೀತಿಯ ಸಂಧಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಎಚ್ಚರಿಕೆ ನೀಡಿದೆ.

“ದೇಶದಲ್ಲಿರುವ ಕೋಟ್ಯಂತರ ಅನಕ್ಷರಸ್ಥರು, ಬಡವರು, ಗ್ರಾಮೀಣ ಪ್ರದೇಶದ ಜನರು ಅಥವಾ ಸ್ಥಳೀಯ ಭಾಷೆ ಮಾತ್ರ ಮಾತನಾಡುವವರು ನಿಮ್ಮ ಗೌಪ್ಯತಾ ನೀತಿಯನ್ನು ಹೇಗೆ ಅರ್ಥಮಾಡಿಕೊಳ್ಳಬೇಕು?” ಎಂದು ಸಿಜೆಐ ಪ್ರಶ್ನಿಸಿದರು. “ರಸ್ತೆಬದಿ ಅಂಗಡಿ ನಡೆಸುವವರು, ಬಡ ಮಹಿಳೆಯರು, ಬಿಹಾರದ ಕುಗ್ರಾಮದ ನಿವಾಸಿಗಳು ಅಥವಾ ತಮಿಳುನಾಡಿನಲ್ಲಿ ತಮಿಳಷ್ಟೇ ಮಾತನಾಡುವವರು- ಇವರಲ್ಲಿ ಎಷ್ಟು ಜನರಿಗೆ ಈ ನೀತಿಯ ಅರ್ಥವಾಗುತ್ತದೆ? ಕೆಲವೊಮ್ಮೆ ನಮಗೇ ನಿಮ್ಮ ನೀತಿಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.