Home News ಕೊಕ್ಕಡದಲ್ಲಿ ರಕ್ತದಾನ ಶಿಬಿರ, 331 ಯೂನಿಟ್ಸ್‌ ರಕ್ತ ಸಂಗ್ರಹಣೆ

ಕೊಕ್ಕಡದಲ್ಲಿ ರಕ್ತದಾನ ಶಿಬಿರ, 331 ಯೂನಿಟ್ಸ್‌ ರಕ್ತ ಸಂಗ್ರಹಣೆ

Hindu neighbor gifts plot of land

Hindu neighbour gifts land to Muslim journalist

ಕೊಕ್ಕಡ: ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಆಶ್ರಯದಲ್ಲಿ, ನೈಮಿಷ ವೆಂಚರ್ಸ್ ಸೌತಡ್ಕ, ಇದರ ಪ್ರಾಯೋಜಕತ್ವದಲ್ಲಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌(ರಿ.) ಸೌತಡ್ಕ, ಸೇವಾಭಾರತಿ (ರಿ.), ಕನ್ಯಾಡಿ ||, ಶ್ರೀರಾಮ ಸೇವಾ ಮಂದಿರ ಕೊಕ್ಕಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ, ಕೆ.ಎಂ.ಸಿ. ರಕ್ತ ನಿಧಿ ಮಂಗಳೂರು, ರೋಟರಿ ಕ್ಯಾಂಪೋ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ದಿ| ಸುಹಾಸ್‌ ಶೆಟ್ಟಿ ಬಟ್ಟೆ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ 01 ರಂದು ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಿತು.

ದಿ. ಸುಹಾಸ್ ಶೆಟ್ಟಿಯವರ ತಂದೆ ಮೋಹನ್ ಶೆಟ್ಟಿ ಮತ್ತು ತಾಯಿ ಸುಲೋಚನ ಎಂ. ಶೆಟ್ಟಿ ಶಿಬಿರ ಉದ್ಘಾಟಿಸಿ, ಶುಭಹಾರೈಸಿದರು.ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಧಾರ್ಮಿಕ ಮುಖಂಡ ಡಿ. ಕಿರಣ್ ಚಂದ್ರ ಪುಷ್ಪಗಿರಿ, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರು ಕೃಷ್ಣ ಭಟ್ ಹಿತ್ತಿಲು, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರು ಹಾಗೂ SCDCC BANK ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಕನ್ಯಾಡಿ ಸೇವಾಭಾರತಿ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಸೌತಡ್ಕ ನೈಮಿಷ ವೆಂಚರ್ಸ್ ಉದ್ಯಮಿ ಬಾಲಕೃಷ್ಣ ನೈಮಿಷ,, ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ.), ಸಂಸ್ಥಾಪಕ ಲೋಕೇಶ್ ಕೋಡಿಕೆರೆ, ಪಾರಿಜಾತ ಹೋಟೆಲ್ ಮಾಲಕರು ಹಾಗೂ ಸೇವಾಭಾರತಿ ಕನ್ಯಾಡಿ ಆರೋಗ್ಯಮ್ ನ ಸಂಚಾಲಕರಾದ ಅಖಿಲೇಶ್ ಶೆಟ್ಟಿ ನೇತ್ರಾವತಿ, ಟೀಮ್ ಕಳವಾರಿನ ಸದಸ್ಯರಾದ ಸಚಿನ್ ಒದ್ದೂರು, ಬಜರಂಗದಳ ಕಾಟಿಪಳ್ಳ ಸುರತ್ಕಲ್ ನ ಸದಸ್ಯೆ ಡಾ. ವಾಣಿಕ KMC ಆಸ್ಪತ್ರೆ, ರೋಟರಿ ಕ್ಯಾಂಸ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ರೋ। ಡಾ. ರಾಮಕೃಷ್ಣ ರಾವ್, ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಷನ್ ಉಜಿರೆಯ ವೇದಾವತಿ ಜನಾರ್ಧನ್, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಇವರು ಎಲ್ಲಾ ರಕ್ತದಾನಿಗಳಿಗೂ ಭಗವತ್ ಗೀತಾ ಪುಸ್ತಕವನ್ನು ನೀಡಿ ಶುಭ ಹಾರೈಸಿದರು.

ಸುಮಾರು 54 ಬಾರಿ ರಕ್ತದಾನ ಮಾಡಿದಂತಹ ಹಿರಿಯ ಭಜಕರಾದ ಪುರುಷೋತ್ತಮ ಮಡ್ಯಲಗುಂಡಿ ಇವರನ್ನು ಗಣ್ಯರ ಸಮ್ಮುಖದಲ್ಲಿ ಗುರುತಿಸಿ, ಗೌರವಿಸಲಾಯಿತು.ಶಿಬಿರದ ಯಶಸ್ಸಿಗೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಸೌತಡ್ಕ, ಸೇವಾ ಭಾರತಿ (ರಿ.) ಕನ್ಯಾಡಿ ॥, ಶ್ರೀರಾಮ ಸೇವಾ ಮಂದಿರ ಕೊಕ್ಕಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ, ಉಜಿರೆ ಹವ್ಯಕ ವಲಯ ಉಪ್ಪಿನಂಗಡಿ ಮಂಡಲ, ಯುವ ಕೇಸರಿ ಕಾವು ಕೌಕ್ರಡಿ, ಸಿದ್ಧಿವಿನಾಯಕ ಸೇವಾ ಸಮಿತಿ ಗೋಳಿತೊಟ್ಟು, ಯುವಶಕ್ತಿ ಫ್ರೆಂಡ್ ಮುಂಡೂರುಪಳಿಕೆ, ಹಿಂದೂ ಜಾಗರಣ ವೇದಿಕೆ ಶಿಶಿಲ, ಟೀಂ ಸಿಂಧೂರ ನೆಲ್ಯಾಡಿ, ಅಶ್ವಥ ಗೆಳೆಯರ ಬಳಗ ಹೊಸಮಜಲು, ನೆಲ್ಯಾಡಿ, ಶಿವಶಕ್ತಿ ಫ್ರೆಂಡ್ಸ್ ಕಳೆಂಜ, ವೀರ ಕೇಸರಿ ಅನಾರು, ಶಕ್ತಿ ಆಟೋ ಚಾಲಕ ಮಾಲಕರ ಸಂಘ, ಕೊಕ್ಕಡ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿವಾಗ್ನಿ ಶಾಖೆ, ಕಳವಾರು, S.VT. ಸ್ಪೋರ್ಟ್ಸ್ ಕ್ಲಬ್ ಪಟ್ರಮೆ, ವಿಶ್ವ ಹಿಂದೂ ಪರಿಷದ್ ಬಜರಂಗದಳ ರೆಖ್ಯ, ಫ್ರೆಂಡ್ಸ್ ಧರ್ಮಸ್ಥಳ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ, ಟೀಂ ಪುಷ್ಪಗಿರಿ, ಬೆಳ್ತಂಗಡಿ, ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ, ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಪಟ್ಲಡ್ಕ, ನಿಸರ್ಗ ಯುವಜನೇತರ ಮಂಡಲ (ರಿ.) ಬರೆಂಗಾಯ ನಿಡ್ಲೆ, ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ರಿ., ಬಿಜೆಪಿ ಯುವಮೋರ್ಚ ಬೆಳ್ತಂಗಡಿ ಮಂಡಲ, ಅಶ್ವಸಿರಿ ಗೆಳೆಯರ ಬಳಗ ಪಾಂಡಿಬೆಟ್ಟು, ಕೊಣಾಲು, ಜೈ ಶ್ರೀ ರಾಮ್ ಫ್ರೆಂಡ್ಸ್ ಪಾರ್ಪಿಕಲ್ಲು ಸಹಕರಿಸಿದರು. ಟೀಮ್ ಸುಹಾಸ್ ಶೆಟ್ಟಿ ಸದಸ್ಯರಾದ ರುಕ್ಕಯ್ಯ ಮಡಿವಾಳ ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು, ಕೇಶವ ಹಳ್ಳಿಂಗೇರಿ ನಿರೂಪಿಸಿ, ಬಾಲಕೃಷ್ಣ ನೈಮಿಷ ಕಾರ್ಯಕ್ರಮದ ಬಗ್ಗೆ ಶುಭನುಡಿಗಳನ್ನಾಡಿ ಧನ್ಯವಾದವಿತ್ತರು. ಶಿಬಿರದಲ್ಲಿ ಒಟ್ಟು 331 ಯೂನಿಟ್ ರಕ್ತ ಸಂಗ್ರಹಣೆಯಾಯಿತು.