

ಕಡಬ: ಪಂಜ ರಸ್ತೆಯ ಕೋಡಿಂಬಾಳ ಮುರ ಚೆಡವು ಎಂಬಲ್ಲಿ ಶುಕ್ರವಾರ ರಾತ್ರಿ ಸುಮಾರು 1 ಗಂಟೆ ವೇಳೆಗೆ ರಸ್ತೆ ಅಪಘಾತ ಸಂಭವಿಸಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎ.ಎಸ್.ಐ ಸೀತಾರಾಮ ಎಂಬವರು ಪ್ರಯಾಣಿಸುತ್ತಿದ್ದ ಕಾರಿಗೆ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತದಲ್ಲಿ ಎಎಸ್ಐ ಸೀತಾರಾಮ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.













