Home Crime ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ

ಜಾತಕ ತೋರಿಸಲು ಬಂದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ

Hyderabad
Image Credit: India.com

Hindu neighbor gifts plot of land

Hindu neighbour gifts land to Muslim journalist

ಕೊಟ್ಟಿಗೆಹಾರ (ಚಿಕ್ಕಮಗಳೂರು): ಜಾತಕ ತೋರಿಸಲು ಬಂದ 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೇವಾಲಯದ ಅರ್ಚಕನ ವಿರುದ್ಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಚಕ ಕೃಷ್ಣರಾವ್ (45) ಬಂಧಿತ ಆರೋಪಿ. ಈತನ ವಿರುದ್ಧ ಅತ್ಯಾಚಾರ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ‘ವಿವಾಹದ ಸಂಬಂಧ ಅರ್ಚಕ ಕೃಷ್ಣರಾವ್‌ಗೆ ಜಾತಕ ತೋರಿಸಲು ಹೋಗಿದ್ದೆ.

ಜಾತಕದಲ್ಲಿ ದೋಷವಿದೆ ಎಂದು ಹೇಳಿದ ಅರ್ಚಕ, ಪೂಜೆ ಮಾಡಿಸಬೇಕೆಂಬ ನೆಪದಲ್ಲಿ 2025ರ ನವೆಂಬ‌ರ್ 23ರಿಂದ 2026ರ ಫೆ.2ರವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ,” ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಅರ್ಚಕ ಕೃಷ್ಣರಾವ್‌ ವಿವಾಹಿತನಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.