Home News ಉಜಿರೆ: ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ವಾತ್ಸಲ್ಯ ಮನೆ ಹಸ್ತಾಂತರ

Hindu neighbor gifts plot of land

Hindu neighbour gifts land to Muslim journalist

ಉಜಿರೆ: ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.

ಅವರು ಗುರುವಾರ ಅರಸಿನಮಕ್ಕಿ ಗ್ರಾಮದ ಜಯಶ್ರೀ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ, ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಶುಭ ಹಾರೈಸಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು ವೃದ್ಧಾಪ್ಯದಲ್ಲಿ ಹಿರಿಯರನ್ನು ಗೌರವಿಸಿ ಸೇವೆ ಮಾಡುತ್ತಾರೆ. ಒಬ್ಬಂಟಿಯಾಗಿರುವವರಿಗೆ ರಾಜ್ಯದೆಲ್ಲೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ “ವಾತ್ಸಲ್ಯ” ಮನೆ ನಿರ್ಮಿಸಿ ಕೊಡಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜ್ಞಾನವಿಕಾಸ ವಿಭಾಗದ ನಿರ್ದೇಶಕ ವಿಠಲಪೂಜಾರಿ, ಪ್ರಾದೇಶಿಕ ನಿರ್ದೇಶಕ ಜಯರಾಮ, ದಿನೇಶ್ ಪೂಜಾರಿ, ಯೋಜನಾಧಿಕಾರಿ ಯಶೋಧರ ಮೊದಲಾದವರು ಉಪಸ್ಥಿತರಿದ್ದರು.