

ಮಂಗಳೂರು: ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಡಲಾಗಿರುವ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದು, ಶಾಸಕರ ಪತ್ನಿಯನ್ನು ಅವಮಾನಿಸಿದ ಕುರಿತು ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಶರಣ್ ರೈ (29) ಎನ್ನುವಾತನ್ನು ಈ ಪ್ರಕರಣ ಸಂಬಂಧ ಪೊಲೀಸರು ಬಂಧನ ಮಾಡಿದ್ದಾರೆ.
ಶರಣ್ ರೈ ಅಮ್ಟಾಡಿ ನಿವಾಸಿಯಾಗಿದ್ದು, ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದು, ಫೇಸ್ಬುಕ್ನಲ್ಲಿ ಶಾಸಕ ವೇದವ್ಯಾಸ ಕಾಮತ್ ಪತ್ನಿಯನ್ನು ಅವಮಾನಿಸಿರುವ ರೀತಿ ಪೋಸ್ಟ್ ಮಾಡಿದ್ದು, ಈ ಕುರಿತು ಮಹಿಳೆಯೊಬ್ಬರು ಪೊಲೀಸ್ ದೂರನ್ನು ನೀಡಿದ್ದರು.
ಈ ಹೇಳಿಕೆಯಿಂದ ಗೃಹಿಣಿಯಾಗಿರುವ ಶಾಸಕರ ಪತ್ನಿಯ ಕುರಿತು ಸಮಾಜದಲ್ಲಿ ಅಗೌರವ ಉಂಟಾಗಿದೆ. ಮಹಿಳೆಯರ ಕುರಿತು ಕೀಳು ಅಭಿರುಚಿಯಿಂದ ಪೋಸ್ಟ್ ಮಾಡಿದ್ದಾಗಿದೆ ಎನ್ನುವ ದೂರಿನ ಪ್ರಕಾರ ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿ ಆರೋಪಿಯನ್ನು ಬಂಧನ ಮಾಡಿದ್ದಾರೆ.













