Home Crime ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತ ಹೊಂದಿದ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಧಿಕ್‌ ಪಾಷಾ (47) ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ ಫೆ.06 ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ಸಾಧಿಕ್‌ ಪಾಷಾ ಕಳೆದ ಆರು ತಿಂಗಳಿನಿಂದ ಲೋ ಬಿಪಿ ಹಾಗೂ ಹೈ ಶುಗರ್‌ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಎನ್ನಲಾಗಿದೆ. ಆರೋಗ್ಯದಲ್ಲಿ ತೀವ್ರ ಅನಾರೋಗ್ಯ ಕಾಣಿಸಿಕೊಂಡ ಕಾರಣ ಜೈಲು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯರಾತ್ರಿ ಸಾಧಿಕ್‌ ಮರಣ ಹೊಂದಿದ್ದಾರೆ.

2020ರಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸ್ಫೋಟಕ ವಸ್ತು ಸಂಗ್ರಹ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಾಧಿಕ್ ಸೇರಿ ಒಟ್ಟು ಆರು ಶಂಕಿತರನ್ನು ಬಂಧಿಸಿತ್ತು. ಅಂದಿನಿಂದ 6 ವರ್ಷಗಳ ಕಾಲ ಪಾಷಾ ಪರಪ್ಪನ ಅಗ್ರಹಾರದಲ್ಲಿಯೇ ಬಂಧಿಯಾಗಿದ್ದ. ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಧಿಕ್ ಪಾಷಾ ಸಾವಿನ ಕುರಿತು ಜೈಲು ಹಾಗೂ ಆಸ್ಪತ್ರೆ ಅಧಿಕಾರಿಗಳು ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.