Home News Kerala: ಸಾಲ ವಾಪಸ್ ಕೊಡದ ಸಾಲಗಾರ- ಆತನ ಮನೆಯೆದುರೆ ಬೆಂಕಿ ಹಚ್ಚಿಕೊಂಡು ಕೊಡಗಿನ ಉದ್ಯಮಿ ಆತ್ಮಹತ್ಯೆ!!

Kerala: ಸಾಲ ವಾಪಸ್ ಕೊಡದ ಸಾಲಗಾರ- ಆತನ ಮನೆಯೆದುರೆ ಬೆಂಕಿ ಹಚ್ಚಿಕೊಂಡು ಕೊಡಗಿನ ಉದ್ಯಮಿ ಆತ್ಮಹತ್ಯೆ!!

Hindu neighbor gifts plot of land

Hindu neighbour gifts land to Muslim journalist

Kerala: ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಮನನೊಂದ ಕೊಡಗಿನ ಉದ್ಯಮಿಯೊಬ್ಬರು ತನ್ನ ಕುಟುಂಬದೊಂದಿಗೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. 

ಕೊಡಗು ಜಿಲ್ಲೆಯ ಉದ್ಯಮಿ ಸಜೀರ್​​​ ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ. 

ವಯನಾಡಿನ ಕಲ್ಪೆಟ್ಟಾದಲ್ಲಿರುವ ಬಾಪು ಅವರ ಮನೆ ಮುಂದೆ ಕಾರನ್ನು ನಿಲ್ಲಿಸಿದ ಸಜೀರ್, ಪತ್ನಿ ಮತ್ತು ಮಕ್ಕಳಿದ್ದ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ತಕ್ಷಣ ಧಾವಿಸಿ ಬಂದಿದ್ದಾರೆ. ಸಮಯ ಪ್ರಜ್ಞೆ ಮೆರೆದ ಜನರು ಕಾರಿನಲ್ಲಿದ್ದ ಮಕ್ಕಳನ್ನು ಹರಸಾಹಸ ಪಟ್ಟು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ. ದುರದೃಷ್ಟವಶಾತ್ ತೀವ್ರವಾಗಿ ಸುಟ್ಟ ಗಾಯಗಳಾಗಿದ್ದ ಸಜೀರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.