Home News ಮಂಗಳೂರು: ಹಿಂದೂ ಮುಖಂಡ ಅಜಿತ್‌ ರೈಗೆ ಗಡಿಪಾರು ನೋಟಿಸ್‌

ಮಂಗಳೂರು: ಹಿಂದೂ ಮುಖಂಡ ಅಜಿತ್‌ ರೈಗೆ ಗಡಿಪಾರು ನೋಟಿಸ್‌

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಕರಾವಳಿಯ ಪ್ರಖರ ಹಿಂದೂ ಸಂಘಟನಾ ಮುಖಂಡ ಅಜಿತ್‌ ರೈ ಹೊಸಮನೆ ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡು ಕುರಿತು ನೋಟಿಸ್‌ ಜಾರಿಯಾಗಿದೆ. ಅಜಿತ್‌ ರೈ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್‌ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣವೇನು?
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ನಿವಾಸಿಯಾಗಿರುವ ಅಜಿತ್‌ ರೈ ಹೊಸಮನೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ. ಈ ಕುರಿತು ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವುದು ಸೂಕ್ತ ಎಂದು ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಅವರು ಜಿಲ್ಲಾಡಳಿತಕ್ಕೆ ಪ್ರಸ್ತಾಪನೆ ಸಲ್ಲಿಸಿದ್ದಾರೆ. ಕರ್ನಾಟಕ ಪೊಲೀಸ್‌ ಕಾಯ್ದೆ 1963 ಕಲಂ 55 ರ ಅಡಿಯಲ್ಲಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ.

ಪೊಲೀಸ್‌ ಇಲಾಖೆ ಈ ಕುರಿತು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಅಜಿತ್‌ ರೈ ಅವರಿಗೆ ನೋಟಿಸ್‌ ನೀಡಿದೆ. ಫೆ.25 ರಂದು ಪುತ್ತೂರು ಎಸಿ ಕೋರ್ಟ್‌ ಸಭಾಂಗಣದಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ.

ಅಜಿತ್‌ ರೈ ಅವರು ಸ್ವತಃ ಅಥವಾ ತಮ್ಮ ಪರವಾಗಿ ನ್ಯಾಯವಾದಿಗಳ ಮೂಲಕ ವಿಚಾರಣೆಗೆ ಹಾಜರಾಗಿ ತಮ್ಮ ವಾದ ಮಂಡಿಸಬಹುದಾಗಿ. ಒಂದು ವೇಳೆ ನಿಗದಿತ ದಿನದಂದು ವಿಚಾರಣೆಗೆ ಗೈರಾದಲ್ಲಿ ಲಭ್ಯವಿರುವ ಪೊಲೀಸ್‌ ದಾಖಲೆಗಳ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಮಾಡಲಾಗುವುದು ಎಂದು ನೋಟಿಸ್‌ನಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.