

Suratkal: ಕಾಸರಗೋಡು ಮೂಲದ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ಅಕೆಯ ಪೋಷಕರು ಮಗಳಿಗಾಗಿ ಸ್ಟೇಷನ್ ಮೆಟ್ಟಿಲೇರುವ ಪ್ರಸಂಗ ಎದುರಾಗಿದೆ. ಅಲ್ಲದೆ ಹಿಂದೂ ಸಂಘಟನೆಗಳು ಇದನ್ನು ಲವ್ ಜಿಹಾದಿ ಎಂದು ಆರೋಪಿಸಿದ್ದಾರೆ.
ಹೌದು, ಕಾಸರಗೋಡಿನ (Kasaragod) ಮೀಪುಗುರಿ ಪ್ರದೇಶದ ನಿವಾಸಿಯಾಗಿರುವ ಯುವತಿ ವೈಶಾಲಿ ದಕ್ಷಿಣ ಕನ್ನಡ ಜಿಲ್ಲೆಯ ಸೂರತ್ಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಕೇರಳದ (Kerala) ವಯನಾಡು ಮೂಲದ ಮಹಮ್ಮದ್ ಮಿಲ್ದಾಜ್ ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದು, ರಿಜಿಸ್ಟರ್ ಮ್ಯಾರೇಜ್ ಆಗಿದ್ದಾಳೆ. ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ಇಬ್ಬರು ಮದುವೆಯಾಗಿದ್ದಾರೆ.
ವಿಷಯ ತಿಳಿದು ಪೋಷಕರು ಆಕೆ ಇದ್ದ ಬಿಜೆಪಿಗೆ ಬಂದು ವಿಚಾರಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಫೆಬ್ರವರಿ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸೆರೆಯಾಗಿದೆ ಮಗಳು ಸಂಪರ್ಕಕ್ಕೆ ಸಿಗದೇ ಇದ್ದಿದ್ದರಿಂದ ಸೂರತ್ಕಲ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಇದೀಗ ಹಿಂದೂ ಸಂಘಟನೆಗಳು ಇದನ್ನು ಲವ್ ಜಿಹಾದ್ ಅಂತ ಆರೋಪಿಸಿದ್ದಾರೆ.













