

ಗ್ರಾಮ ಪಂಚಾಯತ್ ಧರ್ಮಸ್ಥಳ,ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ,
ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ,ಸೇವಾ ಭಾರತಿ (ರಿ). ಕನ್ಯಾಡಿ 2 ವೀರಕೇಸರಿ ಬೆಳ್ತಂಗಡಿ,
ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ. ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ದಿನಾಂಕ 10.02.2026ರಂದು ಬೃಹತ್ ರಕ್ತದಾನ ಶಿಬಿರ ನಡೆಯಿತು.
ಸದರಿ ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರು ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ್ ರಾವ್ ಮಾತನಾಡಿ ರಕ್ತದಾನ ಶ್ರೇಷ್ಠದಾನ ರಕ್ತದಾನ ಮಾಡುವುದರಿಂದ ಅದೆಷ್ಟೋ ಜೀವವನ್ನು ಉಳಿಸಬಹುದು. ರಕ್ತದ ಅಗತ್ಯವಿರುವ ವ್ಯಕ್ತಿ ಪ್ರಸವ ವೇದನೆಯಿಂದ ಬಳಲುತ್ತಿರುವ ತಾಯಿಯಾಗಿರಬಹುದು, ಸಂಸಾರದ ಇಡೀ ಹೊಣೆಯು ತನ್ನ ಮೇಲಿದ್ದು ಅಪಘಾತಕ್ಕೆ ಗುರಿಯಾಗಿ ಬಳಲುತ್ತಿರುವವನಾಗಿರಬಹುದು. ತೀವ್ರ ರಕ್ತಸ್ರಾವದಿಂದ ಅಪಾಯದ ಅಂಚಿನಲ್ಲಿರುವ ಮುಂದಿನ ಪೀಳಿಗೆಯ ತರುಣನಾಗಿರಬಹುದು. ಸಕಾಲದಲ್ಲಿ ಸಿಗುವ ರಕ್ತ ಇಂತಹ ವ್ಯಕ್ತಿಗಳ ಅಮೂಲ್ಯ ಜೀವವನ್ನು ಉಳಿಸಬಲ್ಲುದು. ರಕ್ತದಾನ ಮಾಡುವುದರಿಂದ ಹೃದಯಾಘಾತದ ಸಂಭವ ಹಾಗೂ ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗುವುದು.

ರಕ್ತದಾನ ಮಾಡುವುದರಿಂದ ಆರೋಗ್ಯವಂತ ಜೀವನವನ್ನು ನಡೆಸಬಹುದು. ಗ್ರಾಮ ಪಂಚಾಯತು ಇತರ ಸಂಘ ಸಂಸ್ಥೆಗಳೊಂದಿಗೆ ಸೇರಿಕೊಂಡು ಅತ್ಯುತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಚಾಲಕರು ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸದಸ್ಯರಾದ ಶ್ರೀ ಸುಧಾಕರ ಗೌಡ ಪೂರ್ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಮುರಳಿ ಬಳಿಪ ನೋಟರಿ ವಕೀಲರು, ಶ್ರೀ ಕ್ಷೇತ್ರ ಧರ್ಮಸ್ಥಳ ವಿಭಾಗದಿಂದ ಶ್ರೀ ಭುಜಬಳಿ ಧರ್ಮಸ್ಥಳ, ಗ್ರಾಮ ಪಂಚಾಯತ ಸದಸ್ಯರಾದ ಶ್ರೀ ಮುರಳಿಧರದಾಸ್, ಶ್ರೀ ದಿನೇಶ್ ರಾವ್, ಶ್ರೀಮತಿ ಸುನಿತಾ ಶ್ರೀಧರ್, ಶ್ರೀಮತಿ ಲಕ್ಷ್ಮಿ, ಶ್ರೀಮತಿ ವಸಂತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿಜನಲ್ ಡೈರೆಕ್ಟರ್ ಶ್ರೀ ಜಯರಾಮ್, ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಅಧ್ಯಕ್ಷರಾದ ಶ್ರೀ ಪ್ರೀತಂ, ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯಾಧಿಕಾರಿ ಡಾ. ಪ್ರಜ್ವಲ್, ಸೇವಾ ಭಾರತಿ ಕನ್ಯಾಡಿ ಆರೋಗ್ಯ ವಿಭಾಗದ ಸಂಚಾಲಕರಾದ ಶ್ರೀ ಅಖಿಲೇಶ್ ಶೆಟ್ಟಿ, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಡಿ ಅಶೋಕನಗರ, ಲಿಯೋ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿ ಶ್ರೀ ದೀಕ್ಷಿತ್, ಚಾಮುಂಡೇಶ್ವರಿ ಭಜನಾ ಮಂಡಳಿ ಇದರ ಅಧ್ಯಕ್ಷರಾದ ಶ್ರೀ ಉಮಾನಥ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರದ್ಧಾ, ಸೇವಾ ಭಾರತಿಯ ಮ್ಯಾನೇಜರ್ ಶ್ರೀ ಮೋಹನ್ ಎಸ್, ಶೌರ್ಯ ವಿಪತ್ತು ನಿರ್ವಹಣೆ ತಂಡದ ಅಧ್ಯಕ್ಷರು ಪದಾಧಿಕಾರಿಗಳು , ಸಂಜೀವಿನಿ ಒಕ್ಕೂಟದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಸಿಬ್ಬಂದಿ ವರ್ಗ, ಧರ್ಮಸ್ಥಳ ಗ್ರಾಮ್ ಪಂಚಾಯಿತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಸ್ವಾಗತಿಸಿದರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಧನ್ಯವಾದಗಳು ನೀಡಿದರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿದರು, ಕಾರ್ಯಕ್ರಮವನ್ನು ನಾಡಗೀತೆಯೊಂದಿಗೆ ಪ್ರಾರಂಭಿಸಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು.


ಒಟ್ಟು 105 ಯೂನಿಟ್ ರಕ್ತ ಸಂಗ್ರಹವಾಯಿತು. ರಕ್ತದಾನವನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು ನೀಡಲಾಯಿತು.













