Home latest RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಆಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ

RCB: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಆಡಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ

Hindu neighbor gifts plot of land

Hindu neighbour gifts land to Muslim journalist

RCB: ಆರ್‌ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ. 

ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ದುರಂತದ ಕಾರಣ ಈ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮ್ಯಾಚ್ ನಡೆಯುತ್ತದೆಯೋ, ಇಲ್ಲವೋ ಎಂಬುದು ಅಭಿಮಾನಿಗಳ ಯಕ್ಷ ಪ್ರಶ್ನೆಯಾಗಿತ್ತು. ಒಮ್ಮೊಮ್ಮೆ ಮ್ಯಾಚ್ ನಡೆಯುತ್ತದೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಮಾಡಿದರೆ ಮತ್ತೆ ಕೆಲವೊಮ್ಮೆ ಈ ಬಗ್ಗೆ ನಿರ್ಧಾರವಾಗಿಲ್ಲ ಎಂದು ಹೇಳುತ್ತಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ. ಸಚಿವ ಸಂಪುಟ ಸಭೆಯಲ್ಲ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದು ಆರ್‌ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿಯಾಗಿದೆ. 

ಐಪಿಎಲ್‌ 19ನೇ ಆವೃತ್ತಿಯು ಮಾರ್ಚ್‌ 26, 2026ರಿಂದ ಆರಂಭ ಆಗಲಿದ್ದು, ಮೇ 31ರವರೆಗೆ ನಡೆಯಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ತವರು ಪಂದ್ಯಗಳ ಆಯೋಜನೆ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆರ್‌ಸಿಬಿ ಫ್ರಾಂಚೈಸಿ ಮತ್ತು ರಾಜ್ಯ ಸರ್ಕಾರದ ನಡುವಿನ ಚರ್ಚೆಗಳ ಹಿನ್ನೆಲೆ ಈ ವಿಷಯ ಹಾಗೆಯೇ ಉಳಿದಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸರ್ಕಾರದ ಈ ನಿರ್ಧಾರದಿಂದ ಆರ್‌ಸಿಬಿ ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದ್ದು, ತಮ್ಮ ನೆಚ್ಚಿನ ತಂಡವನ್ನು ತವರು ಕ್ರೀಡಾಂಗಣದಲ್ಲಿ ನೇರವಾಗಿ ವೀಕ್ಷಿಸುವ ಅವಕಾಶ ಮತ್ತೆ ದೊರೆಯಲಿದೆ.