

Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಪ್ರದೇಶಗಳನ್ನು ಸಂದರ್ಶಿಸುತ್ತಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರವು ಆಧಾರ್ ಕಾರ್ಡ್ ತೋರಿಸಿ ಸಾರಿಗೆ ಬಸ್ ನಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಅಂದರೆ ಇನ್ನು ಮುಂದೆ ಈ ಯೋಜನೆಗೆ ಸ್ಮಾರ್ಟ್ ಕಾರ್ಡ್ ಅನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಹೌದು, ಇದುವರೆಗೂ ಮಹಿಳೆಯರು ಆಧಾರ್ ಕಾರ್ಡ್ ತೋರಿಸುವ ಮುಖಾಂತರ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದರು. ಆದರೆ ಇನ್ನು ಮುಂದೆ ಸರ್ಕಾರವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆಸಿದೆ. ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾಡ್೯ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದು, ಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ವಿತರಣೆಗೆ ನಿರ್ಧರಿಸಲಾಗಿದೆ. 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ವಿತರಣೆ ಮಾಡಲಿದೆ. ಸ್ಮಾರ್ಟ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಇನ್ನೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಯಾದ 2.5 ವರ್ಷಗಳ ನಂತರ ಇದೀಗ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಅನು ಮೋದನೆ ಅಧಿಕಾರಿಗಳು ಮುಂದಾಗಿದ್ದಾರೆ.ಗ್ಯಾರಂಟಿ ಅರ್ಹರಿಗೆ ಮಾತ್ರ ದೊರಕುವಂತೆ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ.













