Home News Central Govt : ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್!!

Central Govt : ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್!!

Hindu neighbor gifts plot of land

Hindu neighbour gifts land to Muslim journalist

Central Govt : ಕೇಂದ್ರ ಸರ್ಕಾರ ಕರ್ನಾಟಕದ ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ ಕೊಡುವುದರೊಂದಿಗೆ ಬಿಗ್ ರಿಲೀಫ್‌ ನೀಡಿದೆ. ಕಾಫಿ ಬೆಳೆ ಆನ್‌ಲೈನ್ ಏಲಂ ರದ್ದುಗೊಳಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕರ್ನಾಟಕದ ವಿವಿಧ ಸಂಸದರು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಕಾಫಿ ಬೆಳೆಗಾರರ ಸಮಸ್ಯೆ ಕುರಿತು ವಿವರಣೆ ನೀಡಿದ್ದರು. ಕಾಫಿ ಬೆಳೆ ಆನ್‌ಲೈನ್ ಏಲಂ (e-Auction) ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಇದೀಗ ಈ ವಿಚಾರಕ್ಕೆ ಸ್ಪಂದನೆ ಸಿಕ್ಕಿದೆ. ಆನ್‌ಲೈನ್ ಏಲಂ ರದ್ದುಗೊಳಿಸಲು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಈ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಜ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಸಮಕ್ಷಮ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತರಾಮನ್ ರವರನ್ನು ಪಾರ್ಲಿಮೆಂಟಿನಲ್ಲಿ ಭೇಟಿಯಾಗಿ ಕಾಫಿ ಬೆಳೆಗಾರರನ್ನು ಕಾಡುತ್ತಿರುವ ಸರ್ಪೇಸ್ ಕಾಯಿದೆ ಬಗ್ಗೆ ವಿವರಿಸಿ ಕಾಫಿ ಬೆಳೆಗಾರರ ಸಮಸ್ಯೆಯನ್ನು ಕೆಲ ಮಧ್ಯವರ್ತಿಗಳು ದುರುಪಯೋಗಪಡಿಸಿಕೊಂಡು ವಿದೇಶಗಳಲ್ಲಿ ಆನ್ ಲೈನ್ ಮೂಲಕ ಖರೀದಿಸಿ ಬಡ ರೈತರ ಭೂಮಿಯನ್ನು ಕಬಳಿಸುತ್ತಿದ್ದಾರೆ. ಇದಕ್ಕೆ ಕೆಲವಡೆ ಬ್ಯಾಂಕ್ ಅಧಿಕಾರಿಗಳ ಸಹಮತವೂ ಇದೆ ಎಂಬ ದೂರುಗಳಿವೆ ಎಂದು ವಿವರಿಸಲಾಗಿತ್ತು. ಕಾಫಿ ಬೆಳೆಗಾರರಲ್ಲಿ ಶೇಕಡ 90 ಕ್ಕೂ ಮಿಕ್ಕಿ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಬಹುತೇಕ ಮಂದಿಗೆ ತಮ್ಮ ಭೂಮಿ ಸದ್ರಿ ಕಾಯಿದೆಯಿಂದ ಆನ್ ಲೈನ್ ಮೂಲಕ ಹರಾಜಾಗುತ್ತಿರುವುದು ಅರಿವಿಗೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಪೇಸ್ ಕಾಯಿದೆ ವಿರಹಿತಗೊಳಿಸಬೇಕು ಮತ್ತು ಆನ್ ಲೈನ್ ಮೂಲಕ ಕಾಫಿ ಬೆಳೆಗಳನ್ನು ಹರಾಜು ಹಾಕುವುದನ್ನು ತಡಗಟ್ಟಬೇಕೆಂದು ಮನವಿ ಮಾಡಿದೆವು ಎಂದು ಸಂಸದರು ಹೇಳಿದ್ದಾರೆ.