HomelatestSuprem Court: 'ಸ್ತನ ಹಿಡಿದು, ಪ್ಯಾಂಟ್ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ' ಎಂದಿದ್ದ ಹೈ ಕೋರ್ಟ್‌ ಆದೇಶ...

Suprem Court: ‘ಸ್ತನ ಹಿಡಿದು, ಪ್ಯಾಂಟ್ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂದಿದ್ದ ಹೈ ಕೋರ್ಟ್‌ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Hindu neighbor gifts plot of land

Hindu neighbour gifts land to Muslim journalist

Supreme Court: ಅಲಹಾಬಾದ್ ಹೈಕೋರ್ಟು ಇತ್ತೀಚಿಗೆ ತನ್ನ ಕೆಲವು ವಿಶೇಷ ತೀರ್ಪುಗಳ ಮುಖಾಂತರ ಸುದ್ದಿಯಾಗುತ್ತಿತ್ತು. ಕಳೆದ ವರ್ಷ ಮಹಿಳೆಯರ ಸ್ಥನ ಮುಟ್ಟುವುದು ಪ್ಯಾಂಟ್ ಎಳೆಯುವುದು ಅತ್ಯಾಚಾರ ಆಗುವುದಿಲ್ಲ ಎಂದು ಇದೇ ಕೋರ್ಟ್ ಆದೇಶಿಸಿತ್ತು. ಈ ವಿವಾದಾತ್ಮಕ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. 

ಹೌದು, ಮಹಿಳೆಯರ ಸ್ತನಗಳನ್ನು ಹಿಡಿದು ಪೈಜಾಮಾ ಲಾಡಿ ಬಿಚ್ಚುವುದು “ಅತ್ಯಾಚಾರ ಯತ್ನವಲ್ಲ” ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ(ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು “ಲೈಂಗಿಕ ಅಪರಾಧ ಪ್ರಕರಣಗಳ ನ್ಯಾಯದಾನವು ಕೇವಲ ಕಾನೂನಿನ ಚೌಕಟ್ಟಿಗೆ ಸೀಮಿತವಾಗಿರದೆ, ಅದು ಸಂವೇದನಾಶೀಲತೆ ಮತ್ತು ಸಹಾನುಭೂತಿಯಿಂದ ಕೂಡಿರಬೇಕು” ಎಂದು ಸುಪ್ರೀಂ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್, ಇದು ‘ಅಮಾನವೀಯ ಮತ್ತು ಸಂವೇದನಾ ರಹಿತ’ ತೀರ್ಪು ಎಂದು ಟೀಕಿಸಿದೆ. ಅಲ್ಲದೆ ಸ್ತನಗಳನ್ನು ಹಿಡಿಯುವುದು ಮತ್ತು ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರದ ಪ್ರಯತ್ನವೇ ಹೊರತು, ಕೇವಲ ಸಿದ್ಧತೆಯಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ?

ಸಂತ್ರಸ್ತೆಯು ತನ್ನ ಮೂವರು ಮಹಿಳಾ ಸ್ನೇಹಿತರೊಂದಿಗೆ ದೆಹಲಿಯಲ್ಲಿನ ಬಾರ್​ವೊಂದಕ್ಕೆ ಹೋಗಿ ಅಲ್ಲಿ ಮದ್ಯ ಸೇವಿಸಿದ್ದರು. ಬೆಳಗಿನ ಜಾವ 3 ಗಂಟೆಯವರೆಗೆ ಅತಿಯಾದ ಮದ್ಯ ಸೇವನೆ ಮಾಡಿದ್ದರಿಂದ ಅಲ್ಲಿಯೆ ಇರಬೇಕಾಯಿತು ಎಂದು ಸಂತ್ರಸ್ತೆ ಹೇಳಿದ್ದಾಳೆ ಎಂದು ವರದಿಯಾಗಿತ್ತು. ಇವರ ಬಳಿ ಇದ್ದ ಆರೋಪಿಯು ಮನೆಗೆ ಹೋಗಲು ಆಕೆಯನ್ನು ಒತ್ತಾಯಿಸಿದ್ದಾನೆ. 

ಬೆಳಗಿನ ಜಾವ ಕಾರಣದಿಂದ ಆರೋಪಿ ಜತೆ ಮನೆಗೆ ಹೋಗಲು ವಿಶ್ರಾಂತಿಗೆ ಹೋಗಲು ಒಪ್ಪಿದ್ದಾಳೆ. ಆರೋಪಿಯು ಪ್ರಯಾಣದ ಸಮಯದಲ್ಲಿ ಅನುಚಿತವಾಗಿ ಸ್ಪರ್ಶಿಸಿ ನೋಯ್ಡಾದಲ್ಲಿರುವ ತನ್ನ ಸ್ವಂತ ಮನೆಗೆ ಬದಲಾಗಿ ಗುರಗಾಂವ್‌ನಲ್ಲಿರುವ ತನ್ನ ಸಂಬಂಧಿಕರ ಫ್ಲಾಟ್‌ಗೆ ಕರೆದೊಯ್ದಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. ಅಲ್ಲಿ ಆರೋಪಿಯು ತನ್ನ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಹೀಗಾಗಿ ಆರೋಪಿಗೆ ಜಾಮೀನು ಮಂಜೂರು ಮಾಡುವಾಗ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಇದ್ದ ಪೀಠ , ‘ಸಂತ್ರಸ್ತಳ ಆರೋಪ ನಿಜವೆಂದು ಒಪ್ಪಿಕೊಂಡರೂ ಸಹ, ಆಕೆಯೇ ತೊಂದರೆಗೆ ಆಹ್ವಾನ ನೀಡಿದ್ದಾಳೆ ಮತ್ತು ಅದಕ್ಕೆ ಕಾರಣಳಾಗಿದ್ದಾಳೆ ಎಂದು ತೀರ್ಮಾನಿಸಬಹುದು ಎಂದು ಈ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

RELATED ARTICLES

Most Popular

Recent Comments