

Bhagirathi Basavaraj: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.
9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನ ಇಂದು ಕೋರ್ಟ್ಗೆ (Court) ಹಾಜರು ಪಡಿಸಲಾಗಿತ್ತು. ಮುಖಕ್ಕೆ ಮಾಸ್ಕ್ ಧರಿಸಿ ಜಡ್ಜ್ ಮುಂದೆ ಆರೋಪಿ ಬೈರತಿ ಬಸವರಾಜು ಹಾಜರಾಗಿದ್ರು. ವಿಚಾರಣೆ ಆರಂಭವಾಗ್ತಿದ್ದಂತೆ ಮತ್ತೆ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಮನವಿ ಮಾಡಿದ್ರು. ಇನ್ನೂ ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಇನ್ನಷ್ಟು ತನಿಖೆ ಅಗತ್ಯ ಇದೆ ಎಂದು ವಕೀಲರು ವಾದ ಮಂಡಿಸಿದ್ರು. ಬಳಿಕ ಆರೋಪಿ ಪರ ವಕೀಲರು ಕೂಡ ಪ್ರತಿವಾದ ಮಾಡಿದ್ರು, ಈಗಾಗಲೇ 9 ದಿನಗಳು ಕಸ್ಟಡಿಗೆ ನೀಡಲಾಗಿದೆ
ಬೈರತಿ ಬಸವರಾಜ್ ರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಸಿಐಡಿ ಪೊಲೀಸರು, ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಬೈರತಿ ಬಸವರಾಜ್ಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಹಾಗಾಗಿ ಸೋಮವಾರ ಜಾಮೀನು ಅರ್ಜಿ ವಿಚಾರಣೆ ಇದೆ. ಅಲ್ಲಿ ತನಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅಂತಾ ಬೈರತಿ ಬಸವರಾಜ್ ಪರ ವಕೀಲರು ಮನವಿ ಮಾಡಿಕೊಂಡರು. ಆದರೆ ಸಿಐಡಿ ಪರ ವಕೀಲ ಅಶೋಕ್ ನಾಯಕ್ ವಾದ ಮಂಡಿಸಿ ಜಯದೇವ ಆಸ್ಪತ್ರೆ ಯಲ್ಲಿ ರಿಪೋರ್ಟ್ ನಲ್ಲಿ ಅಂತಹ ಗಂಭೀರ ಸ್ವರೂಪದ ಸಮಸ್ಯೆ ಇಲ್ಲ ಅಂತಾ ಇದೆ. ಹಾಗಾಗಿ ಜೈಲಿಗೆ ಕಳುಹಿಸಿ ಅಲ್ಲೇ ಅಗತ್ಯ ಚಿಕಿತ್ಸೆ ನೀಡಲಿ ಎಂದರು.
ಏನಿದು ಪ್ರಕರಣ?
ಶಾಸಕರಾಗಿ ಆಯ್ಕೆಯಾದ ಬೈರತಿ ಬಸವರಾಜು ಅವರಿಗೆ 2025ರ ಜುಲೈನಲ್ಲಿ ನಡೆದ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಪ್ರಕರಣ ಥಳುಕು ಹಾಕಿಕೊಂಡಿದೆ. ಹಲಸೂರು ಕೆರೆ ಸಮೀಪ 2025ರ ಜುಲೈ 15ರಂದು ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ನ ಕೊಲೆ ಆಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೊಲೆಯಾದ ಶಿವಪ್ರಕಾಶ್ನ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬೈರತಿ 5ನೇ ಆರೋಪಿ. ವಿಚಾರಣೆ ವೇಳೆ ತಮಗೆ ಪ್ರಥಮ ಆರೋಪಿ ಜಗದೀಶ್ ಗೊತ್ತೇ ಇಲ್ಲ ಎಂದು ಬೈರತಿ ವಾದಿಸಿದ್ದರು. ಬಳಿಕ ಈ ವಾದ ಸುಳ್ಳು ಎನ್ನುವುದು ಸಾಬೀತಾಗಿತ್ತು.
