Home » ವಿಚಾರಣೆ ಮುಗಿಸಿ ಹೊರ ಬಂದು ಡಾ.ಶಾಲಿನಿ ರಜನೀಶ್‌ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ವಿಚಾರಣೆ ಮುಗಿಸಿ ಹೊರ ಬಂದು ಡಾ.ಶಾಲಿನಿ ರಜನೀಶ್‌ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

0 comments

Hindu neighbor gifts plot of land

Hindu neighbour gifts land to Muslim journalist

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಬಂಧನ ಮಾಡಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ವಿರುದ್ಧದ ಆರೋಪಗಳಿಗೆ ಅವರು ಕ್ಷಮೆ ಕೇಳಿದ್ದಾರೆ.

ಶನಿವಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು, “ಬೆಂಗಳೂರಿನ ಸೈಬರ್‌ ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಬಂದೆ. ವಿಚಾರಣೆ ಸಂದರ್ಭದಲ್ಲಿ ವಿನೋದ್‌ ಎಂಬಾತ, ಶ್ರೀಮತಿ ಶಾಲಿನಿ ರಜನೀಶ್‌ ಅವರ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ತಿಳಿದು ಬಂದಿದೆ. ಆದ್ದರಿಂದ ನನ್ನಿಂದಾಗಿರುವ ತಪ್ಪಿಗಾಗಿ ಶ್ರೀಮತಿ ಶಾಲಿನಿ ರಜನೀಶ್‌ ಅವರಲ್ಲಿ ಕ್ಷಮೆ ಕೋರುತ್ತೇನೆ” ಎಂದು ಹೇಳಿದ್ದಾರೆ.

ಸ್ನೇಹಮಯಿ ಕೃಷ್ಣ ಮಾಡಿದ ಆರೋಪವೇನು?
ಸ್ನೇಹಮಯಿ ಕೃಷ್ಣ ಮೂರು ಆರೋಪಗಳನ್ನು ಮಾಡಿದ್ದರು. ಅವರ ಮೊದಲ ಆರೋಪ ಮುಡಾ ಮಾಜಿ ಆಯುಕ್ತ ನಟೇಶ್‌ ಬಡ್ತಿ ಪಡೆಯಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ 1.60 ಕೋಟಿ ರೂ. ಲಂಚ ನೀಡಿದ್ದಾರೆ ಎನ್ನುವುದು. ಈ ಆರೋಪಕ್ಕೆ ಪೂರಕವಾಗಿ ಸ್ನೇಹಮಯಿ ಕೃಷ್ಣ ಅವರು ಈ ಹಣವನ್ನು ಹೇಗೆ ಸಾಗಿಸಲಾಯಿತು? ಎಂದು ಕಾರಿನ ಭಾವಚಿತ್ರವನ್ನು ಬಿಡುಗಡೆ ಮಾಡಿದ್ದರು.

You may also like