Home » UP: ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ FIR

UP: ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ FIR

0 comments

Hindu neighbor gifts plot of land

Hindu neighbour gifts land to Muslim journalist

UP: ಗುರುಕುಲದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಜ್ಯೋತಿಷ್ ಪೀಠದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹೌದು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಎಡಿಜೆ ಅತ್ಯಾಚಾರ ಮತ್ತು ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಜ್ಯೋತಿಷ್ ಪೀಠದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ವಾರಾಣಸಿಯ ವಿದ್ಯಾಮಠದಲ್ಲಿ ‘ಗುರು ಸೇವೆ’ಯ ಸೋಗಿನಲ್ಲಿ ಅವಿಮುಕ್ತೇಶ್ವರಾನಂದ ಸ್ವಾಮಿಯ ಆಶ್ರಮವು ಗುರುಕುಲದಲ್ಲಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಿದೆ ಎಂದು ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಶಕುಂಭರಿ ಪೀಠಾಧೀಶ್ವರ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಜನವರಿ 28ರಂದು ಸೆಕ್ಷನ್ 173(4) ಸಿಆರ್‌ಪಿಸಿ ಅಡಿಯಲ್ಲಿ ಅರ್ಜಿಯಲ್ಲಿ ಆರೋಪಿಸಿದ್ದರು. ಅವರು ಅದಕ್ಕೆ ಸಾಕ್ಷ್ಯವಾಗಿ ಸಿಡಿಯನ್ನು ಸಲ್ಲಿಸಿದ್ದರು. ತಮ್ಮನ್ನು ಸಂಪರ್ಕಿಸಿದ್ದ ಸ್ವಾಮೀಜಿಯಿಂದ ಕಿರುಕುಳಕ್ಕೆ ಒಳಗಾದ ಸುಮಾರು 20 ಮಕ್ಕಳ ಬಗ್ಗೆ ಅದರಲ್ಲಿ ನಮೂದಿಸಿದ್ದರು. ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. 

ಫೆಬ್ರವರಿ 13ರಂದು, ನ್ಯಾಯಾಲಯವು ಇಬ್ಬರು ಅಪ್ರಾಪ್ತ ಬಾಲಕರಿಂದ ವೀಡಿಯೊ-ಗ್ರಾಫ್ ಮಾಡಿದ ಹೇಳಿಕೆಗಳನ್ನು ದಾಖಲಿಸಿತ್ತು. ಪೊಲೀಸ್ ವರದಿಯ ಜೊತೆಗೆ ಈ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ನ್ಯಾಯಾಧೀಶರು ಎಫ್‌ಐಆರ್ ದಾಖಲಿಸುವ ನಿರ್ದೇಶನವನ್ನು ನೀಡುವ ಮೊದಲು ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ಜೋನ್ಸಿ ಪೊಲೀಸ್ ಠಾಣೆಗೆ ಆದೇಶಿಸಿದ್ದಾರೆ.

banner

You may also like