

Mobile Ban: ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಅದೇನೆಂದರೆ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ (Students) ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ (Siddaramaiah) ಅವರು ಕುಲಪತಿಗಳ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ವಿವಿ ಕುಲಪತಿಗಳೂ ಒಪ್ಪಿಗೆ ಸೂಚಿಸಿದ್ದಾರೆ.
ಇದರೊಂದಿಗೆ ಡ್ರಗ್ಸ್ ಒಂದು ಪಿಡುಗಾಗಿದ್ದು, ವಿಶ್ವ ವಿದ್ಯಾಲಯಗಳ ಕಾಂಪಸ್ಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದ್ದಾರೆ.