

ಬೆಂಗಳೂರು: ದೈವ ನಿಂದನೆ ಪ್ರಕರಣದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದರೂ ನಟನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಬಾಲಿವುಡ್ ನಟನಿಗೆ ಪೊಲೀಸರು ಎರಡು ನೋಟಿಸ್ ನೀಡಿದ್ದಾರೆ. ಆದರೆ ಯಾವುದಕ್ಕೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಹೌಗ್ರೌಂಡ್ ಪೊಲೀಸರು ಕಾನೂನು ಮೊರೆ ಹೋಗಲು ಮುಂದಾಗಿದ್ದಾರೆ.
ರಣವೀರ್ ಗೋವಾ ಫಿಲ್ಮ್ಫೇರ್ ಕಾರ್ಯಕ್ರಮದಲ್ಲಿ ಮಾತನಾಡುವ ದೈವದ ವಿಚಾರವಾಗಿ ಅವಹೇಳನ ಪದ ಬಳಕೆ ಮಾಡಿದ್ದರು ಎಂದು ಎಫ್ಐಆರ್ ದಾಖಲು ಮಾಡಲಾಗಿತ್ತು. ವಕೀಲ ಪ್ರಶಾಂತ್ ನೀಡಿದ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಪೊಲೀಸರು ಎರಡೆರಡು ಬಾರಿ ನೋಟಿಸ್ ನೀಡಿದ್ದಾರೆ. ಆದರೆ ನೋಟಿಸ್ಗೆ ನಟ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ. ನಟನ ವಾಟ್ಸಪ್ಗೂ ನೋಟಿಸ್ ಕಳುಹಿಸಿರುವ ಪೊಲೀಸರು ನಟನಿಂದ ಡೋಂಟ್ ಕೇರ್ ಆಗಿದೆ. ಹೀಗಾಗಿ ಮತ್ತೊಮ್ಮೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.