Home » Nirmlala Sitaraman: ಚಿನ್ನ – ಬೆಳ್ಳಿ ದರ ಒಂದೇ ಸಮನೆ ಏರಿದ್ದೇಕೆ? ಕೊನೆಗೂ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

Nirmlala Sitaraman: ಚಿನ್ನ – ಬೆಳ್ಳಿ ದರ ಒಂದೇ ಸಮನೆ ಏರಿದ್ದೇಕೆ? ಕೊನೆಗೂ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

0 comments

Hindu neighbor gifts plot of land

Hindu neighbour gifts land to Muslim journalist

Nirmala Sitaraman : ತಟಸ್ಥವಾಗಿದ್ದ ಚಿನ್ನ ಬೆಳ್ಳಿ ದರಗಳು 2025ರ ಅಂತ್ಯದ ವೇಳೆಗೆ ಗಣನೀಯವಾಗಿ ಏರಿಕೆಯನ್ನು ಕಂಡವು. ಇದು ಅಂತ್ಯಗೊಳ್ಳದೆ ಇಂದಿಗೂ ಕೂಡ ದುಬಾರಿ ಲೋಹದ ದರ ಗಗನಕ್ಕೆ ಏರುತ್ತಲೇ ಇದೆ. ಇದೀಗ ಭಾರತದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಚಿನ್ನ ಬೆಳ್ಳಿ ದರ ನಿರಂತರವಾಗಿ ಒಂದೇ ಸಮನೆ ಏರುತ್ತಿರುವುದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ.

ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳು, ಚಿನ್ನದ ಆಮದು, ಹಣದುಬ್ಬರ ಇತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ. ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್​ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್​ಬಿಐ ನಿಗಾ ವಹಿಸಿದೆ ಎಂದು ಅವರು ಹೇಳಿದ್ದಾರೆ.

You may also like