Home » Shivmogga: ಕಾಡು ಪ್ರಾಣಿ ಡಿಕ್ಕಿಯಾಗಿ ಬೈಕ್ ಸವಾರ ಸಾವು – ಮಗನ ಶವ ಕಂಡು ಕೊನೆಯುಸಿರೆಳೆದ ಅಪ್ಪ

Shivmogga: ಕಾಡು ಪ್ರಾಣಿ ಡಿಕ್ಕಿಯಾಗಿ ಬೈಕ್ ಸವಾರ ಸಾವು – ಮಗನ ಶವ ಕಂಡು ಕೊನೆಯುಸಿರೆಳೆದ ಅಪ್ಪ

0 comments

Hindu neighbor gifts plot of land

Hindu neighbour gifts land to Muslim journalist

Shivamogga : ರಾತ್ರಿ ಪಾಳಯದ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಯುವಕನ ಬೈಕ್‌ಗೆ ಕಾಡು ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನ ಶವವನ್ನು ಕಂಡು ಆತನ ತಂದೆಯು ಸಾವನ್ನಪ್ಪಿದ ಅಮಾನುಷ ಘಟನೆ ಎಂದು ಶಿವಮೊಗ್ಗದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ಯಡೂರು ಸಮೀಪದ ಕುಂಬ್ರಿ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ವರದರಾಜ ತೀರ್ಥಹಳ್ಳಿಯಿಂದ ತನ್ನ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದನು. ಈ ವೇಳೆ ಕೌರಿ ಕಾನುಗೋಡು ಸಮೀಪದ ಅರಣ್ಯ ಪ್ರದೇಶದ ರಸ್ತೆಯಲ್ಲಿ ಬರುತ್ತಿದ್ದಾಗ, ಕತ್ತಲಿನಲ್ಲಿ ಏಕಾಏಕಿ ರಸ್ತೆಗೆ ಅಡ್ಡಬಂದ ಕಾಡು ಪ್ರಾಣಿಯೊಂದು ಆತನ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪ್ರಾಣಿ ಡಿಕ್ಕಿಯಾದ ರಭಸಕ್ಕೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆಗೆ ಉರುಳಿದ್ದು, ವರದರಾಜನ ತಲೆಗೆ ಗಂಭೀರ ಪೆಟ್ಟಾಗಿದೆ. ತೀವ್ರ ರಕ್ತಸ್ರಾವವಾದ ಕಾರಣ ಯುವಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ವರದರಾಜನ ತಂದೆ ಮಂಜಪ್ಪ ನಾಯ್ಕ್ ಆತಂಕದಿಂದಲೇ ಘಟನಾ ಸ್ಥಳಕ್ಕೆ ಓಡಿಬಂದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೆತ್ತ ಮಗನ ಶವವನ್ನು ನೋಡಿ ತೀವ್ರ ಆಘಾತಕ್ಕೊಳಗಾದ ತಂದೆ ಮನೆಗೆ ಬಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮೃತ ಯುವಕನನ್ನು ವರದರಾಜ ಮತ್ತು ಆತನ ತಂದೆಯನ್ನು ಮಂಜಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರಾಗಿದ್ದು, ಹೊಟ್ಟೆಪಾಡಿಗಾಗಿ ಬಂದು ಇಲ್ಲಿ ನೆಲೆಸಿದ್ದರು. ಬಡ ಕುಟುಂಬದ ಆಧಾರಸ್ತಂಭವಾಗಿದ್ದ ವರದರಾಜ ತೀರ್ಥಹಳ್ಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದನು.

You may also like